ಚಿತ್ರದುರ್ಗದಲ್ಲಿ ಪ್ಯಾಲೆಸ್ತೇನ್ ಪರ ಘೋಷಣೆ online desk
ರಾಜ್ಯ

ಚಿತ್ರದುರ್ಗ: ಈದ್ ಮೆರವಣಿಗೆ ವೇಳೆ ಪ್ಯಾಲೆಸ್ತೇನ್ ಧ್ವಜ ವಶಕ್ಕೆ ಪಡೆದ ಪೊಲೀಸರು

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಧ್ವಜಗಳನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ, ಸಂಭಾವ್ಯ ಘರ್ಷಣೆಯೊಂದನ್ನು ತಡೆದಿದ್ದಾರೆ.

ಚಿತ್ರದುರ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಮ್ ಸಮುದಾಯಕ್ಕೆ ಸೇರಿದ ಕೆಲವರು ಪ್ಯಾಲೆಸ್ತೇನ್ ಪರವಾಗಿ ಘೋಷಣೆಗಳನ್ನು ಕೂಗಿ ಪ್ಯಾಲೆಸ್ತೇನ್ ಧ್ವಜಗಳನ್ನು ಹಾರಿಸಿದ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಧ್ವಜಗಳನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ, ಸಂಭಾವ್ಯ ಘರ್ಷಣೆಯೊಂದನ್ನು ತಡೆದಿದ್ದಾರೆ.

ಗಾಂಧಿ ವೃತ್ತದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಮೆರವಣಿಗೆ ಸಾಗುತ್ತಿದ್ದಾಗ ಗುಂಪಿನಲ್ಲಿದ್ದ ಕೆಲವರು ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿ ಧ್ವಜಗಳನ್ನು ಬೀಸಲು ಪ್ರಾರಂಭಿಸಿದರು.

ಮೆರವಣಿಗೆಯ ಕಾವಲು ಕಾಯುತ್ತಿದ್ದ ಪೊಲೀಸರು ತಕ್ಷಣವೇ ಧ್ವಜಗಳನ್ನು ಕಸಿದುಕೊಂಡರು, ತಕ್ಷಣವೇ ಯುವಕರು ಪ್ಯಾಲೆಸ್ತೀನ್ ಪರವಾಗಿ ಧ್ವನಿ ಎತ್ತಿದರು.

ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಧ್ಯಮಗಳಿಗೆ ಹೇಳಿಕೆ ನೀಡಿ, "ಗಾಂಧಿ ವೃತ್ತದಲ್ಲಿ ಕೆಲವು ಯುವಕರು ಪ್ಯಾಲೆಸ್ತೀನ್ ಧ್ವಜವನ್ನು ಹೊಂದಿದ್ದು, ಅದನ್ನು ನಮ್ಮವರು ವಶಪಡಿಸಿಕೊಂಡಾಗ, ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಮಾಡಲಾಗಿದ್ದು, ಪ್ರಕರಣ ದಾಖಲಿಸಿ ವಿವರಗಳನ್ನು ಹಂಚಿಕೊಳ್ಳಲಾಗುವುದು" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT