ಅಪ್ರಾಪ್ತರು 
ರಾಜ್ಯ

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕ್​ನಲ್ಲಿ ಓಡಾಟ, ನಾಲ್ವರು ಅಪ್ರಾಪ್ತರ ಬಂಧನ

ನಾಗಮಂಗಲ ಗಲಭೆ ಬೆನ್ನಲ್ಲೇ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕ್ ನಲ್ಲಿ ನಗರದಲ್ಲಿ ಓಡಾಡಿರುವ ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆದಿರುವುದನ್ನು ಪೊಲೀಸ್ ಮೂಲಗಳು ಖಚಿತಪಡಿಸಿವೆ. ಬಂಧಿತ ಅಪ್ರಾಪ್ತರನ್ನು ಘಟನೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ.

ಬಾಲಕರಿಗೆ ಪ್ಯಾಲೆಸ್ಟೈನ್ ಧ್ವಜ ಸಿಕ್ಕಿದ್ದು ಹೇಗೆ? ಧ್ವಜ‌ ನೀಡಿ ನಗರದಾದ್ಯಂತ ಓಡಾಟ ನಡೆಸಲು ಸೂಚನೆ ನೀಡಲಾಗಿತ್ತಾ? ಇಲ್ಲವೇ ತಾವೇ ಸ್ವತ: ಹೀಗೆ ಮಾಡಿದ್ರಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ವಿಚಾರಣೆ ನಡೆಸಲು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈದ್ ಮಿಲಾದ್ ಮೆರವಣಿಗೆ ಸಾಗಲಿರುವ ನಗರದ ಪ್ರಮುಖ ರಸ್ತೆಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ಬೈಕ್ ನಲ್ಲಿ ಅಪ್ರಾಪ್ತರು ಪ್ಯಾಲೆಸ್ಟೈನ್ ಬಾವುಟ ಹಿಡಿದು ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗಮಂಗಲ ಗಲಭೆ ಬೆನ್ನಲ್ಲೇ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಶಾಂತಿಗೆ ಭಂಗ ತರಲು ಶಂಕಿತ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇಂತಹ ಕೆಲಸಕ್ಕೆ ಕುಮ್ಮಕ್ಕು ನೀಡುವವರನ್ನು ಪತ್ತೆ ಮಾಡುವುದು ಸ್ಥಳೀಯ ಪೊಲೀಸರಿಗೆ ಕಷ್ಟಸಾಧ್ಯವಾಗಿದೆ. ಹೀಗಾಗಿ ಈ ಪ್ರಕರಣವನ್ನು ಮುಂದಿನ ತನಿಖೆಗೆ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT