ಅಪ್ರಾಪ್ತರು 
ರಾಜ್ಯ

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕ್​ನಲ್ಲಿ ಓಡಾಟ, ನಾಲ್ವರು ಅಪ್ರಾಪ್ತರ ಬಂಧನ

ನಾಗಮಂಗಲ ಗಲಭೆ ಬೆನ್ನಲ್ಲೇ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕ್ ನಲ್ಲಿ ನಗರದಲ್ಲಿ ಓಡಾಡಿರುವ ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆದಿರುವುದನ್ನು ಪೊಲೀಸ್ ಮೂಲಗಳು ಖಚಿತಪಡಿಸಿವೆ. ಬಂಧಿತ ಅಪ್ರಾಪ್ತರನ್ನು ಘಟನೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ.

ಬಾಲಕರಿಗೆ ಪ್ಯಾಲೆಸ್ಟೈನ್ ಧ್ವಜ ಸಿಕ್ಕಿದ್ದು ಹೇಗೆ? ಧ್ವಜ‌ ನೀಡಿ ನಗರದಾದ್ಯಂತ ಓಡಾಟ ನಡೆಸಲು ಸೂಚನೆ ನೀಡಲಾಗಿತ್ತಾ? ಇಲ್ಲವೇ ತಾವೇ ಸ್ವತ: ಹೀಗೆ ಮಾಡಿದ್ರಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ವಿಚಾರಣೆ ನಡೆಸಲು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈದ್ ಮಿಲಾದ್ ಮೆರವಣಿಗೆ ಸಾಗಲಿರುವ ನಗರದ ಪ್ರಮುಖ ರಸ್ತೆಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ಬೈಕ್ ನಲ್ಲಿ ಅಪ್ರಾಪ್ತರು ಪ್ಯಾಲೆಸ್ಟೈನ್ ಬಾವುಟ ಹಿಡಿದು ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗಮಂಗಲ ಗಲಭೆ ಬೆನ್ನಲ್ಲೇ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಶಾಂತಿಗೆ ಭಂಗ ತರಲು ಶಂಕಿತ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇಂತಹ ಕೆಲಸಕ್ಕೆ ಕುಮ್ಮಕ್ಕು ನೀಡುವವರನ್ನು ಪತ್ತೆ ಮಾಡುವುದು ಸ್ಥಳೀಯ ಪೊಲೀಸರಿಗೆ ಕಷ್ಟಸಾಧ್ಯವಾಗಿದೆ. ಹೀಗಾಗಿ ಈ ಪ್ರಕರಣವನ್ನು ಮುಂದಿನ ತನಿಖೆಗೆ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ