ರಸ್ತೆ ಗುಂಡಿ 
ರಾಜ್ಯ

ರಸ್ತೆ ಗುಂಡಿ ದುರಸ್ತಿ: ಡಿಕೆಶಿ ನೀಡಿದ್ದ ಗಡುವು ಮುಕ್ತಾಯ; ಕೊನೆ ಕ್ಷಣದಲ್ಲಿ ಪಾಲಿಕೆ ಭಾರೀ ಕಸರತ್ತು..!

ರಸ್ತೆ ಗುಂಡಿ ಕುರಿತು ಸಾಕಷ್ಟು ದೂರುಗಳು ಬರುತ್ತಿದ್ದು, ಮುಂದಿನ 15 ದಿನಗಳಲ್ಲಿ ದುರಸ್ತಿ ಕಾರ್ಯ ನಡೆಸದೇ ಹೋದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೆ.1ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದರು.

ಬೆಂಗಳೂರು: ನಗರದಲ್ಲಿನ ರಸ್ತೆ ಗುಂಡಿಗಳ ತುಂಬಿಸುವ ಗಡುವು ಸೆಪ್ಟೆಂಬರ್ 16ಕ್ಕೆ (ಸೋಮವಾರ ಮಧ್ಯರಾತ್ರಿ) ಮುಕ್ತಾಯವಾಗುತ್ತಿದ್ದು, ಸರ್ಕಾರ ಸೂಚನೆಯಂತೆ ರಸ್ತೆ ಗುಂಡಿಗಳ ದುರಸ್ತಿ ಮಾಡಲು ಕೊನೆ ಕ್ಷಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಅಧಿಕಾರಿಗಳು ಭಾರೀ ಕಸರತ್ತು ನಡೆಸುತ್ತಿದೆ.

ರಸ್ತೆ ಗುಂಡಿ ಕುರಿತು ಸಾಕಷ್ಟು ದೂರುಗಳು ಬರುತ್ತಿದ್ದು, ಮುಂದಿನ 15 ದಿನಗಳಲ್ಲಿ ದುರಸ್ತಿ ಕಾರ್ಯ ನಡೆಸದೇ ಹೋದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೆ.1ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದರು.

ಉಪ ಮುಖ್ಯಮಂತ್ರಿಗಳು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಇದರಂತೆ ನೀಡಿದ್ದ ಗಡುವುದು ಇಂದಿಗೆ (ಸೆ.16) ಕೊನೆಗೊಳ್ಳಲಿದೆ.

15 ದಿನಗಳ ನಂತರ ಇದೀಗ ಡಿಕೆ.ಶಿವಕುಮಾರ್ ಅವರು ನಗರದಲ್ಲಿ ಮತ್ತೆ ಪರಿಶೀಲನೆ ನಡೆಸಲಿದ್ದು, ಗಡುವು ಪಾಲನೆ ಮಾಡದ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಈ ನಡುವೆ ಗಡುವಿನ ಅಂತಿಮ ದಿನವಾದ ಭಾನುವಾರ ರಜೆ ದಿನವಾದರೂ ಪಾಲಿಕೆ ಅಧಿಕಾರಿಗಳು ನಗರದಲ್ಲಿ ಗುಂಡಿ ಮುಚ್ಚುವ ಕಾರ್ಯವನ್ನು ತೊಡಗಿದ್ದರು.

ದಾಸರಹಳ್ಳಿ ವಲಯಾರಣ್ಯಾಧಿಕಾರಿ ಗಿರೀಶ್ ಅವರು ತಮ್ಮ ವಲಯದ ಕಾಮಗಾರಿಯ ಮೇಲೆ ನಿಗಾ ವಹಿಸಿ ಮಾತನಾಡಿ, ದಾಸರಹಳ್ಳಿ ವಲಯದ 46 ಕಿ.ಮೀ ಉದ್ದದ ಮುಖ್ಯ ಮತ್ತು ಆರ್ಟೀರಿಯಲ್ ರಸ್ತೆಗಳಲ್ಲಿ ಗುಂಡಿ ತುಂಬುವ ಕೆಲಸ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳಿಸಲು ನಮಗೆ 20 ಲೋಡ್ ಡಾಂಬರು ಬೇಕು. ರಸ್ತೆ ನಿರ್ಮಾಣ ಮಾಡುತ್ತಿರುವ ಸ್ಥಳಗಳಲ್ಲಿ ಡಾಂಬರು ತಂದು ದುರಸ್ತಿ ಕಾರ್ಯ ನಡೆಸುತ್ತಿದ್ದೇವೆಂದು ಹೇಳಿದ್ದಾರೆ.

ಎಲ್ಲಾ ವಲಯಗಳಲ್ಲಿ ಗುಂಡಿ ತುಂಬುವ ಕಾರ್ಯ ನಡೆಯುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದು, ಬಿಬಿಎಂಪಿಗೆ ವರದಿ ಮಾಡಿದ ಎಲ್ಲಾ ಗುಂಡಿಗಳ ದುರಸ್ತಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವರದಿಯಾಗದ ಗುಂಡಿಗಳನ್ನೂ ಕೂಡ ತುಂಬುತ್ತಿದ್ದೇವೆ. ಹಾಗಾಗಿ ಇಲ್ಲಿಯವರೆಗೆ ತುಂಬಿದ ಗುಂಡಿಗಳ ನಿಖರವಾದ ಸಂಖ್ಯೆಯನ್ನು ಇನ್ನೂ ಪಟ್ಟಿ ಮಾಡಿಲ್ಲ. ಮುಖ್ಯ ಆಯುಕ್ತರು ಹೇಳಿದಂತೆ ನಾವು ಗಡುವಿನೊಳಗೆ ಕೆಲಸ ಮಾಡಲು ಪ್ರಯತ್ನಿಸುತ್ತೇವೆಯ ಒಂದು ಅಥವಾ ಎರಡು ದಿನದಲ್ಲಿ ಕೆಲಸ ಪೂರ್ಣಗೊಳ್ಳಬಹುದು ಎಂದು ಹೇಳಿದ್ದಾರೆ.

ಆದಾಗ್ಯೂ, ಹೊಸ ಗುಂಡಿಗಳು ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಸೋಮವಾರ ಬೊಮ್ಮನಹಳ್ಳಿ ವಲಯದಲ್ಲಿ ಗುಂಡಿ ತುಂಬುವ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT