ರಸ್ತೆ ಗುಂಡಿ 
ರಾಜ್ಯ

ರಸ್ತೆ ಗುಂಡಿ ದುರಸ್ತಿ: ಡಿಕೆಶಿ ನೀಡಿದ್ದ ಗಡುವು ಮುಕ್ತಾಯ; ಕೊನೆ ಕ್ಷಣದಲ್ಲಿ ಪಾಲಿಕೆ ಭಾರೀ ಕಸರತ್ತು..!

ರಸ್ತೆ ಗುಂಡಿ ಕುರಿತು ಸಾಕಷ್ಟು ದೂರುಗಳು ಬರುತ್ತಿದ್ದು, ಮುಂದಿನ 15 ದಿನಗಳಲ್ಲಿ ದುರಸ್ತಿ ಕಾರ್ಯ ನಡೆಸದೇ ಹೋದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೆ.1ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದರು.

ಬೆಂಗಳೂರು: ನಗರದಲ್ಲಿನ ರಸ್ತೆ ಗುಂಡಿಗಳ ತುಂಬಿಸುವ ಗಡುವು ಸೆಪ್ಟೆಂಬರ್ 16ಕ್ಕೆ (ಸೋಮವಾರ ಮಧ್ಯರಾತ್ರಿ) ಮುಕ್ತಾಯವಾಗುತ್ತಿದ್ದು, ಸರ್ಕಾರ ಸೂಚನೆಯಂತೆ ರಸ್ತೆ ಗುಂಡಿಗಳ ದುರಸ್ತಿ ಮಾಡಲು ಕೊನೆ ಕ್ಷಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಅಧಿಕಾರಿಗಳು ಭಾರೀ ಕಸರತ್ತು ನಡೆಸುತ್ತಿದೆ.

ರಸ್ತೆ ಗುಂಡಿ ಕುರಿತು ಸಾಕಷ್ಟು ದೂರುಗಳು ಬರುತ್ತಿದ್ದು, ಮುಂದಿನ 15 ದಿನಗಳಲ್ಲಿ ದುರಸ್ತಿ ಕಾರ್ಯ ನಡೆಸದೇ ಹೋದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೆ.1ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದರು.

ಉಪ ಮುಖ್ಯಮಂತ್ರಿಗಳು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಇದರಂತೆ ನೀಡಿದ್ದ ಗಡುವುದು ಇಂದಿಗೆ (ಸೆ.16) ಕೊನೆಗೊಳ್ಳಲಿದೆ.

15 ದಿನಗಳ ನಂತರ ಇದೀಗ ಡಿಕೆ.ಶಿವಕುಮಾರ್ ಅವರು ನಗರದಲ್ಲಿ ಮತ್ತೆ ಪರಿಶೀಲನೆ ನಡೆಸಲಿದ್ದು, ಗಡುವು ಪಾಲನೆ ಮಾಡದ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಈ ನಡುವೆ ಗಡುವಿನ ಅಂತಿಮ ದಿನವಾದ ಭಾನುವಾರ ರಜೆ ದಿನವಾದರೂ ಪಾಲಿಕೆ ಅಧಿಕಾರಿಗಳು ನಗರದಲ್ಲಿ ಗುಂಡಿ ಮುಚ್ಚುವ ಕಾರ್ಯವನ್ನು ತೊಡಗಿದ್ದರು.

ದಾಸರಹಳ್ಳಿ ವಲಯಾರಣ್ಯಾಧಿಕಾರಿ ಗಿರೀಶ್ ಅವರು ತಮ್ಮ ವಲಯದ ಕಾಮಗಾರಿಯ ಮೇಲೆ ನಿಗಾ ವಹಿಸಿ ಮಾತನಾಡಿ, ದಾಸರಹಳ್ಳಿ ವಲಯದ 46 ಕಿ.ಮೀ ಉದ್ದದ ಮುಖ್ಯ ಮತ್ತು ಆರ್ಟೀರಿಯಲ್ ರಸ್ತೆಗಳಲ್ಲಿ ಗುಂಡಿ ತುಂಬುವ ಕೆಲಸ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳಿಸಲು ನಮಗೆ 20 ಲೋಡ್ ಡಾಂಬರು ಬೇಕು. ರಸ್ತೆ ನಿರ್ಮಾಣ ಮಾಡುತ್ತಿರುವ ಸ್ಥಳಗಳಲ್ಲಿ ಡಾಂಬರು ತಂದು ದುರಸ್ತಿ ಕಾರ್ಯ ನಡೆಸುತ್ತಿದ್ದೇವೆಂದು ಹೇಳಿದ್ದಾರೆ.

ಎಲ್ಲಾ ವಲಯಗಳಲ್ಲಿ ಗುಂಡಿ ತುಂಬುವ ಕಾರ್ಯ ನಡೆಯುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದು, ಬಿಬಿಎಂಪಿಗೆ ವರದಿ ಮಾಡಿದ ಎಲ್ಲಾ ಗುಂಡಿಗಳ ದುರಸ್ತಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವರದಿಯಾಗದ ಗುಂಡಿಗಳನ್ನೂ ಕೂಡ ತುಂಬುತ್ತಿದ್ದೇವೆ. ಹಾಗಾಗಿ ಇಲ್ಲಿಯವರೆಗೆ ತುಂಬಿದ ಗುಂಡಿಗಳ ನಿಖರವಾದ ಸಂಖ್ಯೆಯನ್ನು ಇನ್ನೂ ಪಟ್ಟಿ ಮಾಡಿಲ್ಲ. ಮುಖ್ಯ ಆಯುಕ್ತರು ಹೇಳಿದಂತೆ ನಾವು ಗಡುವಿನೊಳಗೆ ಕೆಲಸ ಮಾಡಲು ಪ್ರಯತ್ನಿಸುತ್ತೇವೆಯ ಒಂದು ಅಥವಾ ಎರಡು ದಿನದಲ್ಲಿ ಕೆಲಸ ಪೂರ್ಣಗೊಳ್ಳಬಹುದು ಎಂದು ಹೇಳಿದ್ದಾರೆ.

ಆದಾಗ್ಯೂ, ಹೊಸ ಗುಂಡಿಗಳು ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಸೋಮವಾರ ಬೊಮ್ಮನಹಳ್ಳಿ ವಲಯದಲ್ಲಿ ಗುಂಡಿ ತುಂಬುವ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT