ರೌಡಿ ಶೀಟರ್ ಪವನ್ 
ರಾಜ್ಯ

ಯುವಕನಿಗೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣ: ರೌಡಿ ಶೀಟರ್ ಪವನ್ ಕಾಲಿಗೆ ಗುಂಡೇಟು, ಬಂಧನ!

ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ.

ಬೆಂಗಳೂರು: ಇತ್ತೀಚಿಗೆ ನಡುರಸ್ತೆಯನ್ನು ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ ಹಲ್ಲೆಗೈದಿದ್ದ ರೌಡಿಶೀಟರ್ ಪವನ್ ಅಲಿಯಾಸ್ ಕಡುಬುನನ್ನು ಪೋಲಿಸರು ಬಂಧಿಸಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ. ಬಳಿಕ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪವನ್ ಮೇಲೆ ಬಂಧನದ ವಾರಂಟ್ ಇದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ನಡುವೆ ಯುವಕನನ್ನು ನಡು ರಸ್ತೆಯಲ್ಲಿ ನಗ್ನಗೊಳಿಸಿ, ಹಲ್ಲೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಉಲ್ಲಾಳದ ಹಿಲ್‌ರಾಕ್ ಸ್ಕೂಲ್ ಬಳಿ ಆತನ ಬಂಧನಕ್ಕೆ ತೆರಳಿದ್ದರು. ಬಂಧನಕ್ಕೆ ವೇಳೆ ಕಡುಬು ಹೆಡ್ ಕಾನ್‌ಸ್ಟೇಬಲ್ ವೆಂಕಟೇಶ್ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾನೆ.

ಆತ್ಮರಕ್ಷಣೆಗಾಗಿ ರೌಡಿಯ ಬಲಗಾಲಿಗೆ ಗೋವಿಂದರಾಜ ನಗರದ ಇನ್ಸ್ ಪೆಕ್ಟರ್ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹೊಡೆದಿದ್ದಾರೆ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಕಡುಬುನನ್ನು ಬಂಧಿಸಿದ್ದಾರೆ. ಇನ್ನೂ ಬಂಧಿತ ರೌಡಿ ಶೀಟರ್ ಪವನ್ ಆಲಿಯಾಸ್ ಕಡುಬು ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ

ಕಾಂತಾರ: ಅಧ್ಯಾಯ 1 ಬಾಕ್ಸ್ ಆಫೀಸ್ ಕಲೆಕ್ಷನ್: ಮೊದಲ ವಾರವೇ 500 ಕೋಟಿ ಕ್ಲಬ್‌ಗೆ ಸೇರ್ಪಡೆ, ಹೊಂಬಾಳೆ ಅಧಿಕೃತ ಮಾಹಿತಿ!

ಪಾಕಿಸ್ತಾನಕ್ಕೆ ಭಾರತ ಠಕ್ಕರ್: ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ ಜೊತೆ ಹೊಸ ಸಂಬಂಧ, ಕಾಬೂಲ್ ನಲ್ಲಿ ರಾಯಭಾರ ಕಚೇರಿ ಪುನಃಸ್ಥಾಪನೆ!

'ಸೂಪರ್ ಸ್ಟಾರ್ ಗಳು 8 ಗಂಟೆ ಮಾತ್ರ ಕೆಲಸ ಮಾಡ್ತಾರೆ, ಅದರ ಬಗ್ಗೆ ಸುದ್ದಿನೇ ಇಲ್ಲ': Kalki, Spirit ಸಿನಿಮಾಗಳಿಂದ ಕೊಕ್, ಕೊನೆಗೂ ಮೌನ ಮುರಿದ ದೀಪಿಕಾ ಪಡುಕೋಣೆ

Airstrikes in Kabul: ಭಾರತ- ತಾಲಿಬಾನ್ ಮತ್ತಷ್ಟು ಹತ್ತಿರ, 'ಹೊಟ್ಟೆಗೆ ಬೆಂಕಿ ಬಿದ್ದಂಗೆ' ಆಡ್ತಿರುವ ಪಾಕಿಸ್ತಾನ!

SCROLL FOR NEXT