ಮುನಿರತ್ನ 
ರಾಜ್ಯ

ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಮುನಿರತ್ನ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು.

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಮೇಲೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.

ಮುನಿರತ್ನ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು.

ಶಾಸಕ ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಳ್ಳಿ ಅವರು ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದೆ ಮತ್ತು ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ತಿರುಪತಿಗೆ ಹೋಗುವಾಗ ಮುನಿರತ್ನ ಅವರನ್ನು ಬಂಧಿಸಿದ್ದಾರೆ. ವಿಚಾರಣೆಗೆ ನೋಟಿಸ್ ಕೂಡ ಕೊಟ್ಟಿಲ್ಲ. ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ನೋಟಿಸ್ ಕೊಡಬೇಕು. ತರಾತುರಿಯಲ್ಲಿ ಎಫ್‌ಐಆರ್ ದಾಖಲಿಸಿ ಬಂಧನ ಮಾಡಿದ್ದಾರೆ. 41 ಎ ನೋಟಿಸ್ ನೀಡಬೇಕು. ಇದೊಂದು ರಾಜಕೀಯ ಪ್ರೇರಿತ ಕೇಸ್ ಎಂದು ವಾದಿಸಿದರು.

ಈ ಸಂಬಂಧ ನಾಳೆ ಆಕ್ಷೆಪಣೆ ಸಲ್ಲಿಕೆ ಮಾಡಲಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಸದ್ಯ ಮುನಿರತ್ನ ಅವರನ್ನು ಕೋರ್ಟ್‌ನಿಂದ ನೇರವಾಗಿ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಕರೆದುಕೊಂಡು ಹೋದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT