ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43)ಗೆ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಇಂಥಹದ್ದೇ ಆರೋಪದಲ್ಲಿ ಮತ್ತೆ ಭಾಗಿಯಾಗುವಂತಿಲ್ಲ. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ ಪ್ರಾಸಿಕ್ಯೂಷನ್ ಜಾಮೀನು ರದ್ದತಿಗೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

ಇದರೊಂದಿಗೆ ಪ್ರಕರಣದ 18 ಆರೋಪಿಗಳ ಪೈಕಿ 8 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಈ ಹಿಂದೆ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ, ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

'ನಾನಿನ್ನೂ IPL ಮುಖ್ಯಸ್ಥನಾಗಿದ್ರೆ ತಕ್ಷಣವೇ ಸಂಜೀವ್ ಗೋಯೆಂಕಾ ಬ್ಯಾನ್' ಮಾಡ್ತಿದೆ- ಲಲಿತ್ ಮೋದಿ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

ಹೊಸ ಇಂಡಕ್ಷನ್ ಸ್ಟೌವ್ ಖರೀದಿಸುತ್ತಿದ್ದೀರಾ? ಬೆಸ್ಕಾಂನ ಈ ಮಾರ್ಗಸೂಚಿ ಗಮನಿಸಿ!

SCROLL FOR NEXT