ಪರಮೇಶ್ವರ್  
ರಾಜ್ಯ

ಧ್ವಜ ಪ್ರದರ್ಶನ ಆರೋಪ: ಕೇಂದ್ರ ಸರ್ಕಾರ ಪ್ಯಾಲೆಸ್ತೇನ್ ಗೆ ಬೆಂಬಲ ನೀಡಿರುವಾಗ ನಾವೇನೂ ತಪ್ಪು ಮಾಡಿಲ್ಲ- ಬಂಧಿತರ ಹೇಳಿಕೆ

ಆರೋಪಿಗಳು ಸದ್ಯ ಬಂಧನದಲ್ಲಿದ್ದು, ವಿಚಾರಣೆ ಮುಂದುವರೆದಿದೆ. ಬಾವುಟ ಪ್ರದರ್ಶಿಸಿ ಎಂದು ಅವರಿಗೆ ಹೇಳಿದವರು ಯಾರೆಂಬ ಬಗ್ಗೆ ಮಾಹಿತಿ ತಿಳಿಯಲು ವಿಚಾರಣೆ ನಡೆಯುತ್ತಿದೆ.

ಬೆಂಗಳೂರು: ಕೇಂದ್ರ ಸರ್ಕಾರ ಪ್ಯಾಲೆಸ್ತೇನ್ ಗೆ ಬೆಂಬಲ ವ್ಯಕ್ತಪಡಿಸಿರುವಾಗ ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಪ್ಯಾಲೆಸ್ತೇನ್ ಬಾವುಟ ಪ್ರದರ್ಶನ ಸಂಬಂಧ ಬಂಧಿಸಲಾಗಿರುವ ಆರೋಪಿಗಳು ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೇನ್ ಧ್ವಜ ಪ್ರದರ್ಶನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಿದ್ದೇವೆ. ಕೇಂದ್ರ ಸರ್ಕಾರ ಪ್ಯಾಲೆಸ್ತೇನ್ ಗೆ ಬೆಂಬಲ ನೀಡಿರುವಾಗ ನಾವು ಏನು ತಪ್ಪು ಮಾಡಿಲ್ಲ ಎಂದು ಅವರು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಆರೋಪಿಗಳು ಸದ್ಯ ಬಂಧನದಲ್ಲಿದ್ದು, ವಿಚಾರಣೆ ಮುಂದುವರೆದಿದೆ. ಬಾವುಟ ಪ್ರದರ್ಶಿಸಿ ಎಂದು ಅವರಿಗೆ ಹೇಳಿದವರು ಯಾರೆಂಬ ಬಗ್ಗೆ ಮಾಹಿತಿ ತಿಳಿಯಲು ವಿಚಾರಣೆ ನಡೆಯುತ್ತಿದೆ. ಆರೋಪಿಗಳೆಲ್ಲರೂ 17 ರಿಂದ 21 ವರ್ಷದೊಳಗಿನವರಾಗಿದ್ದಾರೆ ಎಂದರು.

ನಾಗಮಂಗಲ ಗಲಭೆ ವೇಳೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಇಂತಹ ಘೋಷಣೆಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲ. ಕೆಲವರು ಸುಳ್ಳು ಹೇಳಿಕೆ ನೀಡುತ್ತಿದ್ದು, ಈ ವಿಚಾರ ಕುರಿತು ಪರಿಶೀಲಿಸಲಾಗುತ್ತಿದೆ. ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ತನಿಖಾ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT