ಕೆಪಿಎಸ್ ವಿದ್ಯಾರ್ಥಿಗಳ ತಂಡ 
ರಾಜ್ಯ

ಮಡಿಕೇರಿ: ದೈಹಿಕ ಶಿಕ್ಷಕರಿಲ್ಲದಿದ್ದರೂ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ KPS ವಿದ್ಯಾರ್ಥಿಗಳು

ಕೆಪಿಎಸ್ ನ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ಮಡಿಕೇರಿ: ದೈಹಿಕ ತರಬೇತುದಾರರು ಇಲ್ಲದಿದ್ದರೂ ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು 14 ವರ್ಷದೊಳಗಿನವರ ಫುಟ್ಬಾಲ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಕೆಪಿಎಸ್ ನ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ಹಿಂದೆ ಇದ್ದ ದೈಹಿಕ ತರಬೇತುದಾರರು ಎರಡು ವರ್ಷಗಳ ಹಿಂದೆ ವರ್ಗಾವಣೆಯಾದರು, ಅವರ ವರ್ಗಾವಣೆ ನಂತ ಹುದ್ದೆ ಭರ್ತಿಯಾಗದೆ ಉಳಿದಿದೆ. ಹೀಗಿದ್ದರೂ ಕೆಪಿಎಸ್ ನೆಲ್ಲಿಹುದಿಕೇರಿ ಶಾಲೆಯಲ್ಲಿ 14 ವರ್ಷದೊಳಗಿನವರ ಫುಟ್ ಬಾಲ್ ತಂಡ ಪ್ರತಿನಿತ್ಯ ಅಭ್ಯಾಸ ಮಾಡುತ್ತಿತ್ತ ಎಂದು ಮೂಲಗಳು ತಿಳಿಸಿವೆ. ಕ್ಯಾಪ್ಟನ್ ಮೊಹಮ್ಮದ್ ಶಿಹಾಲ್ ನೇತೃತ್ವದ 11 ವಿದ್ಯಾರ್ಥಿಗಳ ತಂಡವು ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬದಿಂದ ಬಂದಿದೆ. ಆದಾಗ್ಯೂ, ಪಟ್ಟುಬಿಡದ ಅಭ್ಯಾಸದಿಂದ ಅವರಿಗೆ ಉತ್ತಮ ಅವಕಾಶ ತಂದಕೊಟ್ಟಿದೆ. ಈ ತಂಡದಿಂದ ಏಳು ಮಂದಿ ಈಗ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ನಮ್ಮ ಶಾಲೆಯ ತಂಡವು ವಲಯ, ತಾಲೂಕು, ಜಿಲ್ಲೆ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಅರ್ಹತೆ ಪಡೆದಿದೆ. ಕಲ್ಬುರ್ಗಿ, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಇತರ ತಂಡಗಳ ವಿರುದ್ಧ ಜಯಗಳಿಸಿದ ಅವರ ಆಟವು ಗಮನಾರ್ಹವಾಗಿತ್ತು ಎಂದು ಸಂಸ್ಥೆ ಶಿಕ್ಷಕರಾಗಿರುವ ಆದರೆ ಚಾಂಪಿಯನ್‌ಶಿಪ್‌ನಲ್ಲಿ ತಂಡದ ವ್ಯವಸ್ಥಾಪಕರಾಗಿರುವ ಶಶಿಕುಮಾರ್ ವಿವರಿಸಿದರು. ರಾಜ್ಯಮಟ್ಟದಲ್ಲಿ ಕೆಪಿಎಸ್ ನೆಲ್ಲಿಹುದಿಕೇರಿ ತಂಡ ಬೆಂಗಳೂರು ವಿರುದ್ಧ ಸೋಲನುಭವಿಸಿತು. ಆದರೆ, ಕೆಪಿಎಸ್ ನೆಲ್ಲಿಹುದಿಕೇರಿ ಪ್ರಥಮ ರನ್ನರ್ ಅಪ್ ಆಗಿದ್ದು, ತಂಡದಿಂದ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಸೇರಿ ಮಹಾರಾಷ್ಟ್ರದಲ್ಲಿ ನಡೆಯಲಿರುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಫುಟ್ ಬಾಲ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT