ಕೆಪಿಎಸ್ ವಿದ್ಯಾರ್ಥಿಗಳ ತಂಡ 
ರಾಜ್ಯ

ಮಡಿಕೇರಿ: ದೈಹಿಕ ಶಿಕ್ಷಕರಿಲ್ಲದಿದ್ದರೂ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ KPS ವಿದ್ಯಾರ್ಥಿಗಳು

ಕೆಪಿಎಸ್ ನ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ಮಡಿಕೇರಿ: ದೈಹಿಕ ತರಬೇತುದಾರರು ಇಲ್ಲದಿದ್ದರೂ ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು 14 ವರ್ಷದೊಳಗಿನವರ ಫುಟ್ಬಾಲ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಕೆಪಿಎಸ್ ನ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ಹಿಂದೆ ಇದ್ದ ದೈಹಿಕ ತರಬೇತುದಾರರು ಎರಡು ವರ್ಷಗಳ ಹಿಂದೆ ವರ್ಗಾವಣೆಯಾದರು, ಅವರ ವರ್ಗಾವಣೆ ನಂತ ಹುದ್ದೆ ಭರ್ತಿಯಾಗದೆ ಉಳಿದಿದೆ. ಹೀಗಿದ್ದರೂ ಕೆಪಿಎಸ್ ನೆಲ್ಲಿಹುದಿಕೇರಿ ಶಾಲೆಯಲ್ಲಿ 14 ವರ್ಷದೊಳಗಿನವರ ಫುಟ್ ಬಾಲ್ ತಂಡ ಪ್ರತಿನಿತ್ಯ ಅಭ್ಯಾಸ ಮಾಡುತ್ತಿತ್ತ ಎಂದು ಮೂಲಗಳು ತಿಳಿಸಿವೆ. ಕ್ಯಾಪ್ಟನ್ ಮೊಹಮ್ಮದ್ ಶಿಹಾಲ್ ನೇತೃತ್ವದ 11 ವಿದ್ಯಾರ್ಥಿಗಳ ತಂಡವು ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬದಿಂದ ಬಂದಿದೆ. ಆದಾಗ್ಯೂ, ಪಟ್ಟುಬಿಡದ ಅಭ್ಯಾಸದಿಂದ ಅವರಿಗೆ ಉತ್ತಮ ಅವಕಾಶ ತಂದಕೊಟ್ಟಿದೆ. ಈ ತಂಡದಿಂದ ಏಳು ಮಂದಿ ಈಗ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ನಮ್ಮ ಶಾಲೆಯ ತಂಡವು ವಲಯ, ತಾಲೂಕು, ಜಿಲ್ಲೆ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಅರ್ಹತೆ ಪಡೆದಿದೆ. ಕಲ್ಬುರ್ಗಿ, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಇತರ ತಂಡಗಳ ವಿರುದ್ಧ ಜಯಗಳಿಸಿದ ಅವರ ಆಟವು ಗಮನಾರ್ಹವಾಗಿತ್ತು ಎಂದು ಸಂಸ್ಥೆ ಶಿಕ್ಷಕರಾಗಿರುವ ಆದರೆ ಚಾಂಪಿಯನ್‌ಶಿಪ್‌ನಲ್ಲಿ ತಂಡದ ವ್ಯವಸ್ಥಾಪಕರಾಗಿರುವ ಶಶಿಕುಮಾರ್ ವಿವರಿಸಿದರು. ರಾಜ್ಯಮಟ್ಟದಲ್ಲಿ ಕೆಪಿಎಸ್ ನೆಲ್ಲಿಹುದಿಕೇರಿ ತಂಡ ಬೆಂಗಳೂರು ವಿರುದ್ಧ ಸೋಲನುಭವಿಸಿತು. ಆದರೆ, ಕೆಪಿಎಸ್ ನೆಲ್ಲಿಹುದಿಕೇರಿ ಪ್ರಥಮ ರನ್ನರ್ ಅಪ್ ಆಗಿದ್ದು, ತಂಡದಿಂದ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಸೇರಿ ಮಹಾರಾಷ್ಟ್ರದಲ್ಲಿ ನಡೆಯಲಿರುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಫುಟ್ ಬಾಲ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ

ದುಬಾರಿಯಾಗುತ್ತಾ LPG ದರ?: ಭಾರತ-ಅಮೆರಿಕ ಒಪ್ಪಂದದಿಂದ ಗ್ರಾಹಕರ ಮೇಲೆ ಪರಿಣಾಮ, ತೈಲ ಸಂಸ್ಥೆಗಳಿಗೆ ದುಬಾರಿ.. ತಜ್ಞರು ಹೇಳಿದ್ದೇನು?

Cricket: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು, ಪಾಕಿಸ್ತಾನಕ್ಕೆ ಲಾಭ, WTC ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ!

SCROLL FOR NEXT