ಪುಷ್ಪಾ ಅಮರನಾಥ್ 
ರಾಜ್ಯ

ಸ್ವಯಂ ಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲು ಅವಕಾಶ: ಪುಷ್ಪಾ ಅಮರನಾಥ್

ಗ್ಯಾರಂಟಿ ಯೋಜನಗಳನ್ನು ಬಿಟ್ಟುಕೊಡಲು ಬಯಸುವ ಫಲಾನುಭವಿಗಳು ಇರಬಹುದು ಮತ್ತು ಅವರಿಗೆ ಆಯ್ಕೆಯನ್ನು ನೀಡಲಾಗುವುದು ಎಂದರು.

ಮಂಗಳೂರು: ಈ ಹಿಂದೆ ಎಲ್‌ಪಿಜಿ ಸಬ್ಸಿಡಿ ಕೈಬಿಟ್ಟಂತೆ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಅವಕಾಶ ಕಲ್ಪಿಸುವ ಪ್ರಸ್ತಾಪವಿದೆ ಎಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಬುಧವಾರ ಹೇಳಿದ್ದಾರೆ.

ಇಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಮರನಾಥ್, ಗ್ಯಾರಂಟಿ ಯೋಜನಗಳನ್ನು ಬಿಟ್ಟುಕೊಡಲು ಬಯಸುವ ಫಲಾನುಭವಿಗಳು ಇರಬಹುದು ಮತ್ತು ಅವರಿಗೆ ಆಯ್ಕೆಯನ್ನು ನೀಡಲಾಗುವುದು ಎಂದರು.

ಗೃಹಲಕ್ಷ್ಮಿಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವುದು ನಮ್ಮ ಗುರಿ. ಆದರೆ ಯಾರಿಗೆ ಈ ಯೋಜನೆಗಳ ಅಗತ್ಯವಿಲ್ಲ ಅನಿಸುತ್ತದೆಯೋ ಅಂಥವರು ಸ್ವಯಂ ಪ್ರೇರಣೆಯಿಂದ ಯೋಜನೆಯಿಂದ ಬಿಟ್ಟುಕೊಡಲು ಅವಕಾಶ ಕಲ್ಪಿಸುವ ಚಿಂತನೆ ನಡೆಸಲಾಗಿದೆ. ಈ ಹಿಂದೆ ಗ್ಯಾಸ್ ಸಬ್ಸಿಡಿ ಬೇಡದವರು ಕೈಬಿಡುವ ವ್ಯವಸ್ಥೆ ಜಾರಿಗೆ ತರಲಾಗಿತ್ತು. ಅದೇ ರೀತಿ ಗ್ಯಾರಂಟಿ ಯೋಜನೆಯಲ್ಲೂ ಜಾರಿಗೆ ತರಲು ಮುಖ್ಯಮಂತ್ರಿ ಬಳಿ ಮಾತುಕತೆ ನಡೆಸಲಾಗುವುದು ಎಂದು ಪುಷ್ಪಾಅಮರನಾಥ್ ತಿಳಿಸಿದರು.

ಆದಾಯ ತೆರಿಗೆ ಪಾವತಿಸದಿದ್ದರೂ ಅನೇಕ ಅರ್ಹ ವ್ಯಕ್ತಿಗಳು ಗೃಹಲಕ್ಷ್ಮಿಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಈ ಬಗ್ಗೆ ಐಟಿ ಇಲಾಖೆಯೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸುತ್ತದೆ ಅವರು ಹೇಳಿದರು.

ಗೃಹಲಕ್ಷ್ಮಿ ಯೋಜನೆಗೆ ಹೆಚ್ಚಿನ ಸಂಖ್ಯೆಯ ಅರ್ಹ ಮಹಿಳೆಯರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ, ಅರ್ಹ ವ್ಯಕ್ತಿಗಳ ನೋಂದಣಿಗೆ ಅಧಿಕಾರಿಗಳಿಗೆ ಟಾರ್ಗೆಟ್ ನಿಗದಿಪಡಿಸಲಾಗುವುದು ಎಂದು ಪುಷ್ಪಾ ಅಮರನಾಥ್ ಹೇಳಿದರು.

ಗೃಹಲಕ್ಷ್ಮಿಯೋಜನೆಯಡಿ ರೇಶನ್ ಕಾರ್ಡ್ಗಳ ಆಧಾರದಲ್ಲಿ ಫಲಾನುಭವಿಗಳನ್ನು ಗುರುತಿಸಿ ಗುರಿ ನಿಗದಿಪಡಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೀಗೆ ಗುರುತಿಸಲಾದ ಒಟ್ಟು 4,03,333 ಮಹಿಳೆಯರಲ್ಲಿ ಶೇ.92ರಷ್ಟು ಮಂದಿಗೆ (3,69,292) ಎರಡು ಸಾವಿರ ರು. ತಲುಪುತ್ತಿದೆ. ತಮಗೆ ಅಗತ್ಯ ಇಲ್ಲ ಎಂಬ ಕಾರಣಕ್ಕೋ, ಮಾಹಿತಿ ಕೊರತೆಯಿಂದಲೋ ಅಥವಾ ಭೌತಿಕವಾಗಿ ಬಂದು ಅರ್ಜಿ ಹಾಕಲು ಸಾಧ್ಯವಿಲ್ಲದೆ ಉಳಿದವರು ಇರಬಹುದು. ಅವರೆಲ್ಲರನ್ನು ಹುಡುಕಿ ಗೃಹಲಕ್ಷ್ಮಿಗೆ ನೋಂದಣಿ ಮಾಡಿಸಿ ಶೇ.100ರಷ್ಟು ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT