ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವ್ಯಾಪಾರದಲ್ಲಿ ನಷ್ಟ, ಸಾಲ ತೀರಿಸಲು 50 ಲ್ಯಾಪ್‌ಟಾಪ್ ಕಳ್ಳತನ, ವ್ಯಕ್ತಿಯ ಬಂಧನ

ವೈಟ್‌ಫೀಲ್ಡ್‌ನಲ್ಲಿ ತಾನು ಉದ್ಯೋಗದಲ್ಲಿದ್ದ ಕಂಪನಿಯಿಂದ ಲ್ಯಾಪ್‌ಟಾಪ್‌ ಕದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ತಮಿಳುನಾಡಿನ ಹೊಸೂರಿನ ಬಿಸಿಎ ಪದವೀಧರ ಎಂ. ಮುರುಗೇಶ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ವ್ಯಾಪಾರದಲ್ಲಿ ನಷ್ಟ ಉಂಟಾಗಿ, ಸಾಲ ತೀರಿಸಲು ಸುಮಾರು 22 ಲಕ್ಷ ರೂ. ಮೌಲ್ಯದ 50 ಕಂಪನಿ ಲ್ಯಾಪ್‌ಟಾಪ್‌ಗಳನ್ನು ಕದ್ದ ಆರೋಪದ ಮೇಲೆ ಮಲ್ಟಿಮೀಡಿಯಾ ಸಂಸ್ಥೆಯಲ್ಲಿ ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ಮಾಡುತ್ತಿದ್ದ 29 ವರ್ಷದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೊಮ್ಯಾಟೋ ಕೃಷಿ, ಸೈಬರ್ ಸೆಂಟರ್ ವ್ಯವಹಾರದಿಂದ 25 ಲಕ್ಷ ರೂ. ನಷ್ಟ ಅನುಭವಿಸಿರುವುದಾಗಿ ಬಂಧಿತ ಆರೋಪಿ ಹೇಳಿರುವುದಾಗಿ ಪೊಲೀಸರು ಹೇಳಿದ್ದಾರೆ. ವ್ಯಾಪಾರದಲ್ಲಿನ ನಷ್ಟದಿಂದ ಸಾಲದ ಸುಳಿಗೆ ಸಿಲುಕಿ ಅದರಿಂದ ಹೊರಬರಲು ವೈಟ್‌ಫೀಲ್ಡ್‌ನಲ್ಲಿ ತಾನು ಉದ್ಯೋಗದಲ್ಲಿದ್ದ ಕಂಪನಿಯಿಂದ ಲ್ಯಾಪ್‌ಟಾಪ್‌ ಕದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ತಮಿಳುನಾಡಿನ ಹೊಸೂರಿನ ಬಿಸಿಎ ಪದವೀಧರ ಎಂ. ಮುರುಗೇಶ್ ಎಂದು ಗುರುತಿಸಲಾಗಿದೆ.

ಆಗಾಗ್ಗೆ ಲ್ಯಾಪ್ ಟಾಪ್ ಕದ್ದು, ಹೊಸೂರಿನ ಗ್ಯಾಜೆಟ್‌ಗಳ ರಿಪೇರಿ ಅಂಗಡಿಗೆ ಮಾರಾಟ ಮಾಡಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಆಗಸ್ಟ್ 22 ರಿಂದ ಇದ್ದಕ್ಕಿದ್ದಂತೆ ಕೆಲಸಕ್ಕೆ ಬರುವುದನ್ನು ನಿಲ್ಲಿಸಿದ್ದು, ಲ್ಯಾಪ್ ಟಾಪ್ ನಾಪತ್ತೆ ಕುರಿತು ಕಂಪನಿ ಅಧಿಕಾರಿಗಳು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಆರೋಪಿ ಕಳ್ಳತನದಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿದು ಬಂದಿದೆ. ಕಂಪನಿಯಿಂದ ದೂರು ಸ್ವೀಕರಿಸಿದ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಹೊಸೂರಿನ ಚಿತ್ರಮಂದಿರದಿಂದ ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧನದ ವೇಳೆ ಆತನಿಂದ ಐದು ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 45 ಲ್ಯಾಪ್‌ಟಾಪ್‌ಗಳನ್ನು ಕದ್ದು ಮಾರಾಟ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಕಳುವಾದ ಲ್ಯಾಪ್‌ಟಾಪ್‌ಗಳ ಮೌಲ್ಯ 22 ಲಕ್ಷ ರೂ. ಎಂದು ಹೇಳಲಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT