ಪಾಲಿಕೆ ಬಜಾರ್ 
ರಾಜ್ಯ

ವಿಜಯನಗರ ಪಾಲಿಕೆ ಬಜಾರ್: ಅತಿಕ್ರಮದಾರರ ವಿರುದ್ಧ BBMP ಕ್ರಮ, 50 ಮಾರಾಟಗಾರರು ಹೊರಕ್ಕೆ..!

ಪಾಲಿಕೆ ಬಜಾರ್‌ನಲ್ಲಿರುವ 79 ಅಂಗಡಿಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಿಕೆ ಮಾಡಬೇಕಾಗಿತ್ತು, ಆದರೆ, ಇದನ್ನು ಅನುಸರಿಸಲಾಗಿಲ್ಲ.

ಬೆಂಗಳೂರು: ವಿಜಯನಗರದ ಪಾಲಿಕೆ ಬಜಾರ್ ನಲ್ಲಿ ಬಿಬಿಎಂಪಿ ಅಧಿಕಾರಿಗಳು ನಡೆಸಿದ ಅತಿಕ್ರಮಣ ಕಾರ್ಯಾಚರಣೆ ವೇಳೆ 50 ಮಂದಿ ಮಾರಾಟಗಾರರನ್ನು ತೆರವುಗೊಳಿಸಲಾಗಿದೆ.

ಆದರೆ, ಪಾಲಿಕೆ ಕಾರ್ಯಾಚರಣೆ ಕುರಿತು ಕೆಲ ಆರೋಪಗಳು ಕೇಳಿ ಬಂದಿದ್ದು, ಕಾಂಗ್ರೆಸ ಪರವಾಗಿದ್ದ ಮಾರಾಟಗಾರರಿಗೆ ಅಂಗಡಿಗಳ ಬೀಗ ನೀಡಲಾಗಿದ್ದು, ವರ್ಷಗಳಿಂದ ಮಾರಾಟ ಮಾಡುತ್ತಿದ್ದವರಿದೆ ಪ್ರವೇಶ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ.

ಪಾಲಿಕೆ ಬಜಾರ್‌ನಲ್ಲಿರುವ 79 ಅಂಗಡಿಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಿಕೆ ಮಾಡಬೇಕಾಗಿತ್ತು, ಆದರೆ,. ಇದನ್ನು ಅನುಸರಿಸಲಾಗಿಲ್ಲ ಎಂದು ವಕೀಲ ಮತ್ತು ಕಾರ್ಯಕರ್ತ ವಿನಯ್ ಶ್ರೀನಿವಾಸ್ ಅವರು ಆರೋಪಿಸಿದ್ದಾರೆ.

ಈಗಾಗಲೇ ನಾವು ನ್ಯಾಯಾಲಯದ ಮೊರೆ ಹೋಗಲಾಗಿದ್ದು, ವ್ಯಾಪಾರಿಗಳ ವಿರುದ್ದ ಕ್ರಮ ಕೈಗೊಳ್ಳದಂತೆ ತಡೆಯಾಜ್ಞೆ ನೀಡಿದೆ ಎಂದು ಹೇಳಿದ್ದಾರೆ.

ಪಟ್ಟಣ ಮಾರಾಟ ಸಮಿತಿ ಸದಸ್ಯೆ ಶಶಿಕಲಾ ಮಾತನಾಡಿ, ಪಾಲಿಕೆ ಬಜಾರ್ ಬಳಿ ತರಕಾರಿ, ಹೂವು, ಬಟ್ಟೆ ಮತ್ತಿತರ ವಸ್ತುಗಳ ಮಾರಾಟ ಮಾಡುವ ಮೂಲಕ ಅನೇಕ ಮಾರಾಟಗಾರರು, ವಿಧವೆಯರು ಮತ್ತು ಒಂಟಿ ಮಹಿಳೆಯರು ಜೀವನ ಸಾಗಿಸುತ್ತಿದ್ದಾರೆ. ನಾನು ವಿಜಯನಗರದಲ್ಲಿ ಕಳೆದ 32 ವರ್ಷಗಳಿಂದ ಸರಕುಗಳನ್ನು ಮಾರಾಟ ಮಾಡುತ್ತಿದ್ದೇನೆ. ನನ್ನಂತೆ ಸುಮಾರು 130 ಮಾರಾಟಗಾರರಿದ್ದಾರೆ ಮತ್ತು ಅವರಲ್ಲಿ ಸುಮಾರು 50 ಮಂದಿಯನ್ನು ಹೊರಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾರ್ಯನಿರ್ವಾಹಕ ಎಂಜಿನಿಯರ್ ಜೈಶಂಕರ್ ಅವರು ಮಾತನಾಡಿ, ಫುಟ್‌ಪಾತ್‌ಗಳಲ್ಲಿ ಪಾದಚಾರಿ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಕಾಯಿದೆ 2020 ರ ಅಡಿಯಲ್ಲಿ 60 ಪ್ರತಿಶತದಷ್ಟು 'ಅತಿಕ್ರಮಣ'ಗಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಪಾಲಿಕೆ ಕಾರ್ಯಾಚರಣೆ ವಿರುದ್ಧ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಹೀಗಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಆದೇಶ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT