ಅಪಾಯಕಾರಿ ಮರಗಳ ತೆರವುಗೊಳಿಸುತ್ತಿರುವ ಬಿಬಿಎಂಪಿ. 
ರಾಜ್ಯ

ಬೆಂಗಳೂರು: ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಅಭಿಯಾನ ಆರಂಭ..!

ದುರಂತಗಳ ತಪ್ಪಿಸಲು ಬಿಬಿಎಂಪಿ ಹಾಗೂ ಬೆಸ್ಕಾಂ ಜಂಟಿಯಾಗಿ ಕಾರ್ಯಾಚರಣೆ ನಡೆಸಲಿವೆ. ನಾಗರಿಕರಿಂದ ಬಂದ ದೂರುಗಳಿಂದ 1,371 ಮರಗಳು ಮತ್ತು 3,700 ಕೊಂಬೆಗಳನ್ನು ತೆರವುಗೊಳಿಸಲಾಗಿದೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರ, ಒಣಗಿದ ಮರ ಹಾಗೂ ಮರದ ರೆಂಬೆ, ಕೊಂಬೆಗಳು, ವಿದ್ಯುತ್‌ ಕಂಬಗಳನ್ನು ಆವರಿಸಿರುವ ಮರಗಳ ತೆರವು ಕಾರ್ಯಾಚರಣೆ ಅಭಿಯಾನವನ್ನು ಆರಂಭಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು, ದಕ್ಷಿಣ ವಲಯದ ಜಯನಗರದ ಕಮ್ಯುನಿಟಿ ಕಾಲೇಜು ಬಳಿ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದುರಂತಗಳ ತಪ್ಪಿಸಲು ಬಿಬಿಎಂಪಿ ಹಾಗೂ ಬೆಸ್ಕಾಂ ಜಂಟಿಯಾಗಿ ಕಾರ್ಯಾಚರಣೆ ನಡೆಸಲಿವೆ. ನಾಗರಿಕರಿಂದ ಬಂದ ದೂರುಗಳಿಂದ 1,371 ಮರಗಳು ಮತ್ತು 3,700 ಕೊಂಬೆಗಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಅರಣ್ಯ ವಿಭಾಗದಿಂದ ನಿರಂತರವಾಗಿ ಅಪಾಯ ಸ್ಥಿತಿಯಲ್ಲಿರುವ ಮರ ಕಟಾವು ಮಾಡಲಾಗುತ್ತಿದೆ. ಮಳೆಗಾಲದಲ್ಲಿ ಬಿರುಗಾಳಿಯಿಂದಾಗಿ ಮರಗಳು ಬೀಳುತ್ತವೆ. ಅವುಗಳ ತೆರವಿಗೆ ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿಯಾಗಿ ತೆರವು ಕಾರ್ಯಾಚರಣೆ ತಂಡಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಓಡಾಟ ಹಾಗೂ ವಾಹನ ದಟ್ಟಣೆ ಹೆಚ್ಚಿರುವಂತಹ ರಸ್ತೆಗಳಲ್ಲಿ ಮರದ ರೆಂಬೆ, ಕೊಂಬೆಗಳನ್ನು ರಾತ್ರಿ ವೇಳೆ ಕಟಾವು ಮಾಡಿ, ಕೂಡಲೇ ಡಂಪಿಂಗ್ ಯಾರ್ಡ್‌ಗೆ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ಮರದ ರೆಂಬೆ, ಕೊಂಬೆಗಳ ತೆರವು ಕಾರ್ಯಾಚರಣೆ ನಿರಂತರವಾಗಿರುತ್ತದೆ. ಪಾಲಿಕೆ ಹಾಗೂ ಬೆಸ್ಕಾಂ ಸೇರಿ ವಿದ್ಯುತ್ ತಂತಿಗಳಿಗೆ ತಗಲುವ ರೆಂಬೆಗಳನ್ನು ತೆರವು ಮಾಡುವ ಅಭಿಯಾನವನ್ನು ಶುಕ್ರವಾರದಿಂದ 10 ದಿನ ನಡೆಸಲಾಗುವುದು.ಮುಖ್ಯ ರಸ್ತೆಗಳಲ್ಲಿ ಸಾಕಷ್ಟು ಮರಗಳ ಕೊಂಬೆಗಳು ಇರುವುದರಿಂದ ವಿದ್ಯುತ್ ದೀಪಗಳ ಬೆಳಕನ್ನು ಅದು ತಡೆಯುತ್ತಿದೆ. ಹೀಗಾಗಿ ಈ ಕೊಂಬೆಗಳನ್ನು ತೆರವುಗೊಳಿಸಿ ರಸ್ತೆಗೆ ಸೂಕ್ತ ಬೆಳಕು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಮುಖ ರಸ್ತೆಗಳಲ್ಲಿ ಸಮೀಕ್ಷೆ ಮಾಡಿ ನಂತರ ಅಪಾಯ ಸ್ಥಿತಿಯಲ್ಲಿರುವ ಮರಗಳ ತೆರವು ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ ಜುಲೈನಿಂದ ಈವರೆಗೆ ಒಣಗಿದ/ಅಪಾಯ ಸ್ಥಿತಿಯಲ್ಲಿರುವ 478 ಮರ ಹಾಗೂ 592 ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ಅಲ್ಲದೆ ನಾಗರಿಕರಿಂದ ಬಂದಿರುವ ದೂರುಗಳನ್ನು ಆಧರಿಸಿ ಮಳೆ ಗಾಳಿಗೆ ಬಿದ್ದಂತಹ ಸುಮಾರು 1,371 ಮರಗಳು ಹಾಗೂ 3,700 ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರು ಒಣಗಿರುವ, ಅಪಾಯ ಸ್ಥಿತಿಯಲ್ಲಿರುವ ಮರ ಹಾಗೂ ಮರದ ರೆಂಬೆ, ಕೊಂಬೆಗಳು ಕಂಡುಬಂದರೆ ಅಥವಾ ಗಾಳಿ,ಮಳೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಬೇಕಾದರೆ, ಬಿಬಿಎಂಪಿಯ ಸಹಾಯವಾಣಿ ಸಂಖ್ಯೆ 1533 ಅಥವಾ 080-22221188 / 08022660000 ಗೆ ಕರೆ ಮಾಡಬಹುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT