ಮುನಿರತ್ನ 
ರಾಜ್ಯ

ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧ; ತನಿಖೆಗೆ ಎಸ್‌ಐಟಿ ರಚನೆ

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎನ್ ಮುನಿರತ್ನ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.

ಎಸ್‌ಐಟಿ ರಚನೆ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು.

ದೂರಿನ ಅನ್ವಯ ಪೊಲೀಸರು ಐಟಿ ಆಕ್ಟ್‌ 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ‘KD’ ಸಿನಿಮಾದ ಅಶ್ಲೀಲ ಹಾಡು; ‘ಸರ್ಸೆ ನಿನ್ನ ಸೆರಗ ಸರ್ಸೆ’ ಬ್ಯಾನ್!

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

'ಮಾರ್ಚ್ 25ರೊಳಗೆ ಬಾಕಿ ಇರುವ ಎಲ್ಲಾ ಉತ್ತರಗಳ ಸಲ್ಲಿಸಿ': ಸರ್ಕಾರಕ್ಕೆ ಪರಿಷತ್ ಸಭಾಪತಿ ಹೊರಟ್ಟಿ ಗಡುವು!

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ..' 'ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': ಬಾಲಿವುಡ್ ನಟಿ Nora Fatehi ಶಾಕಿಂಗ್ ಹೇಳಿಕೆ

SCROLL FOR NEXT