ಸಂಗ್ರಹ ಚಿತ್ರ 
ರಾಜ್ಯ

ಗಂಗಾರತಿ ಮಾದರಿಯಲ್ಲೇ ಕಾವೇರಿಗೂ ಆರತಿ: ದಸರಾ ವೇಳೆ ಆರಂಭಕ್ಕೆ ಸರ್ಕಾರ ಚಿಂತನೆ..!

ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಮಾತುಕತೆ ನಡೆಸಿ, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿತು.

ಬೆಂಗಳೂರು: ಉತ್ತರ ಭಾರತದಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿಯೇ ರಾಜ್ಯದ ಕಾವೇರಿ ನದಿಗೆ ಕಾವೇರಿ ಆರತಿ ನಡೆಸಲು ಸರ್ಕಾರ ಮುಂದಾಗಿದ್ದು, ದಸರಾ ವೇಳೆಗೆ ಆರಂಭಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಅಧ್ಯಯನ ನಡೆಸಲು ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರ ಮತ್ತು ವಾರಾಣಾಸಿಗೆ ಭೇಟಿ ನೀಡಿದೆ.

ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಮಾತುಕತೆ ನಡೆಸಿ, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿತು.

ಗಂಗಾ ಆರತಿ ವೀಕ್ಷಣೆ ಜತೆಗೆ ಪೂಜೆಯಲ್ಲಿ ಭಾಗಿಯಾದ ಬಳಿಕ‌ ಮಾತನಾಡಿದ ಸಚಿವ ಚಲುವರಾಯಸ್ವಾಮಿಯವರು, ‘ಕಾವೇರಿ ಆರತಿಗೆ ಎರಡು, ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಅಂತಿಮಗೊಂಡ ಸ್ಥಳದಲ್ಲಿ ಆರತಿಗಾಗಿ ಸೋಪಾನೆಕಟ್ಟೆ ನಿರ್ಮಿಸಲಾಗುವುದು. ಹರಿದ್ವಾರದಲ್ಲಿ ನಿತ್ಯ ಗಂಗಾ ಆರತಿ ನಡೆಯುತ್ತಿದೆ. ರಾಜ್ಯದಲ್ಲಿ ವಾರದಲ್ಲಿ ಎರಡು ಅಥವಾ ಮೂರು ದಿನ ಆರತಿ ಮಾಡಬೇಕೆ? ನಿತ್ಯ ಆರತಿ ನಡೆಸಬೇಕೇ ಎಂಬುದರ ಬಗ್ಗೆ ಸಮಿತಿ ಜತೆ ಚರ್ಚಿಸಿ ನಿರ್ಧರಿಸಲಾಗುವುದು. ಆರಂಭದಲ್ಲಿ ಹರಿದ್ವಾರ ಮತ್ತು ವಾರಾಣಸಿಯ ಸಾಧು, ಸಂತರನ್ನು ಆಹ್ವಾನಿಸಿ ಅವರಿಂದ ಕಾವೇರಿ ಆರತಿ ನಡೆಸಲಾಗುತ್ತದೆ. ಬಳಿಕ ಅವರಿಂದಲೇ ಸ್ಥಳೀಯ ವೈದಿಕರಿಗೆ ತರಬೇತಿ ಕೊಡಿಸಿ ಕಾವೇರಿ ಆರತಿ ಮುಂದುವರಿಸಲಾಗುವುದು ಎಂದು ಹೇಳಿದರು.

ಹರಿದ್ವಾರದ ಗಂಗಾ‌ ಮಹಾಸಭಾದ ಸಮಿತಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗಂಗಾ ಆರತಿ ಇತಿಹಾಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಲವು ಸಲಹೆಗಳನ್ನು ನೀಡಿದ್ದಾರೆ. ಶನಿವಾರ ವಾರಾಣಸಿಗೆ ತೆರಳಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿ ವೀಕ್ಷಿಸಲಾಗುವುದು. ಭಾನುವಾರ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವುದರ ಜೊತೆಗೆ ಘಾಟ್‌ನಲ್ಲಿ ಸಂಚರಿಸಿ, ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

ಸುಮಾರು 5 ಕೋಟಿ ರೂ.ವೆಚ್ಚದಲ್ಲಿ ಕಾವೇರಿಗೆ ಆರತಿ ಯೋಜನೆ ರೂಪಿಸಲಾಗುತ್ತಿದ್ದು, ಅಧ್ಯಯನ ನಡೆಸಲು ಚಾಮರಾಜನಗರ, ಮೈಸೂರು, ಮಂಡ್ಯ, ಮಡಿಕೇರಿ ಭಾಗದ ಶಾಸಕರ ಸಮಿತಿಯನ್ನು ರಚಿಸಲಾಗಿದೆ.

ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯಲ್ಲಿ ಶಾಸಕರಾದ ನರೇಂದ್ರಸ್ವಾಮಿ, ಶಿವಲಿಂಗೇಗೌಡ, ರಮೇಶ್ ಬಂಡಿ ಸಿದ್ದೇಗೌಡ, ಉದಯ್ ಗೌಡ, ರವಿಕುಮಾರ್ ಗಣಿಗ, ಮಾಗಡಿ ಬಾಲಕೃಷ್ಣ, ಹರೀಶ್​ಗೌಡ, ದರ್ಶನ್ ಧ್ರುವನಾರಾಯಣ್ ಇದ್ದು, ಚಿತ್ರನಟ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ ಅವರು ಸಮೀತಿಯಲಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸೂಚನೆಯಂತೆ ಕಾವೇರಿ ಆರತಿ ಕುರಿತು ವಿಶೇಷ ಹಾಡು ರಚಿಸಲಿದ್ಧಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT