ಸಿಜೆಐ ಡಿವೈ ಚಂದ್ರಚೂಡ್ online desk
ರಾಜ್ಯ

ಸಮಾಜದಲ್ಲಿನ ಅಪರೂಪದ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಸಿಜೆಐ ಕರೆ

ಮಾರ್ಚ್ 2021 ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆರಂಭಿಸಿದ ಅಪರೂಪದ ರೋಗಗಳ ರಾಷ್ಟ್ರೀಯ ನೀತಿಯನ್ನು ಉಲ್ಲೇಖಿಸಿರುವ ಸಿಜೆಐ, ಆನುವಂಶಿಕ ಕಾಯಿಲೆಗಳ ಬಗ್ಗೆ ನಾವು ಇನ್ನು ಮುಂದಿನ ದಿನಗಳಲ್ಲಿ ಅರಿವಿಲ್ಲದಂತೆ ಇರುವುದಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ಸಮಾಜದಲ್ಲಿನ ಅಪರೂಪದ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದು, ಸಾಂಸ್ಕೃತಿಕ, ಧಾರ್ಮಿಕ ಅಥವಾ ಸಾಂಪ್ರದಾಯಿಕ ಅಡೆತಡೆಗಳನ್ನು ಲೆಕ್ಕಿಸದೆ ಅಂತಹ ಪೋಷಕರು ಮತ್ತು ಅವರ ಕುಟುಂಬಗಳಿಗೆ ಸಹಾನುಭೂತಿ ಮತ್ತು ಬೆಂಬಲ ನೀಡುವುದು ಅಗತ್ಯ ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಮಾರ್ಚ್ 2021 ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆರಂಭಿಸಿದ ಅಪರೂಪದ ರೋಗಗಳ ರಾಷ್ಟ್ರೀಯ ನೀತಿಯನ್ನು ಉಲ್ಲೇಖಿಸಿರುವ ಸಿಜೆಐ, ಆನುವಂಶಿಕ ಕಾಯಿಲೆಗಳ ಬಗ್ಗೆ ನಾವು ಇನ್ನು ಮುಂದಿನ ದಿನಗಳಲ್ಲಿ ಅರಿವಿಲ್ಲದಂತೆ ಇರುವುದಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಮಾರ್ಚ್ 2021 ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪ್ರಾರಂಭಿಸಿದ ಅಪರೂಪದ ಕಾಯಿಲೆಗಳ ರಾಷ್ಟ್ರೀಯ ನೀತಿಯನ್ನು ಉಲ್ಲೇಖಿಸಿದ ಅವರು, ಅಪರೂಪದ ಕಾಯಿಲೆಗಳ ವ್ಯಾಖ್ಯಾನವನ್ನು ವ್ಯಾಖ್ಯಾನಿಸಲು ಹೆಚ್ಚಿನ ಸಂಶೋಧನೆ ಅಗತ್ಯ ಎಂದು ಹೇಳಿದರು ಮತ್ತು ಭಾರತದಂತಹ ವೈವಿಧ್ಯಮಯ ರಾಷ್ಟ್ರದಲ್ಲಿ ಜೀನ್ ಥೆರಪಿಯಂತಹ ಸುಧಾರಿತ ವೈದ್ಯಕೀಯ ಚಿಕಿತ್ಸೆಗೆ ಸಮಾನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಜೀನ್ ಥೆರಪಿ ಮತ್ತು ನಿಖರವಾದ ಔಷಧದ ಕುರಿತು ನಾರಾಯಣ ನೇತ್ರಾಲಯ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್, "ಭಾರತದಂತಹ ದೇಶ 4,600 ಕ್ಕೂ ಹೆಚ್ಚು ವಿಭಿನ್ನ ಜನಸಂಖ್ಯೆಯ ಗುಂಪುಗಳನ್ನು ಹೊಂದಿರುವ ವಿಶ್ವದ ಅತಿದೊಡ್ಡ ಜನಸಂಖ್ಯೆಯ ನೆಲೆಯಾಗಿದೆ, ಅವುಗಳಲ್ಲಿ ಹಲವು ಅಂತರ್ಜಾತಿಗಳಾಗಿದ್ದು, ಅಪರೂಪದ ಕಾಯಿಲೆಗಳ ಹೆಚ್ಚಿನ ಹೊರೆಯನ್ನು ನಾವು ಎದುರಿಸುತ್ತೇವೆ. ದುರದೃಷ್ಟವಶಾತ್, ಈ ನವೀನ ಚಿಕಿತ್ಸೆಗಳು ಭಾರತದಲ್ಲಿ ಮತ್ತು ಇತರ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ಹೆಚ್ಚಾಗಿ ಲಭ್ಯವಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಏಪ್ರಿಲ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಾರಂಭಿಸಿದ ಕ್ಯಾನ್ಸರ್‌ಗಾಗಿ ದೇಶದ ಮೊದಲ ಸ್ವದೇಶಿ ವಂಶವಾಹಿ ಚಿಕಿತ್ಸೆಯನ್ನು ಉಲ್ಲೇಖಿಸಿದ ಸಿಜೆಐ, CAR T ಸೆಲ್ ಥೆರಪಿಯು ಅದರ ನಿರ್ಬಂಧಿತ ವೆಚ್ಚಗಳಿಂದಾಗಿ ಜಾಗತಿಕವಾಗಿ ಸಾಮಾನ್ಯವಾಗಿ ಕೈಗೆಟುಕುವುದಿಲ್ಲ, ಆದರೆ ಇಂದು ಪರಿಚಯಿಸಲಾದ ಚಿಕಿತ್ಸೆಯು ಕ್ರಾಂತಿಕಾರಿ ಮಾತ್ರವಲ್ಲದೆ ವಿಶ್ವದ ಅತ್ಯಂತ ಕೈಗೆಟುಕುವ CAR T ಸೆಲ್ ಚಿಕಿತ್ಸೆಯನ್ನು ಪ್ರತಿನಿಧಿಸುತ್ತದೆ, ಇದು ಮೇಕ್ ಇನ್ ಇಂಡಿಯಾ ಉಪಕ್ರಮದ ಆತ್ಮವನ್ನು ಸಾಕಾರಗೊಳಿಸುತ್ತದೆ. ಈ ನಾವೀನ್ಯತೆಯ ಹೊರತಾಗಿಯೂ, ಎಲ್ಲಾ ರೋಗಿಗಳಿಗೆ ಅಂತಹ ಚಿಕಿತ್ಸೆಗಳು ಲಭ್ಯವಾಗುವನ್ನು ಖಾತರಿಪಡಿಸುವ ಸವಾಲನ್ನು ನಾವು ಎದುರಿಸುತ್ತೇವೆ. ವಿಶೇಷವಾಗಿ ಹಿಂದುಳಿದ ಪ್ರದೇಶಗಳಲ್ಲಿರುವವರಿಗೆ ಈ ಚಿಕಿತ್ಸೆಯ ಲಭ್ಯ ಸವಾಲಾಗಿದೆ ಎಂದು ಸಿಜೆಐ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT