ಬೆಂಗಳೂರಿನಲ್ಲಿ ಯುವತಿ ಕೊಲೆ 
ರಾಜ್ಯ

Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ; ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್ (Shraddha Walkar) ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿ ಯುವತಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ದೇಹವನ್ನು 30 ತುಂಡುಗಳಾಗಿಸಿ ಫ್ರಿಡ್ಜ್ ನಲ್ಲಿಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾರೆ ಎಂದು ಹೇಳಲಾಗಿದೆ.

ಮೇಲ್ನೋಟಕ್ಕೆ ಮೃತ ಯುವತಿಯನ್ನು ಹೊರ ರಾಜ್ಯದಿಂದ ಬಂದ ಸುಮಾರು 25 ರಿಂದ 26 ವಯಸ್ಸಿನವಳು ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಈ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ವೈಯಾಲಿಕಾವಲ್ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ‘ಒಬ್ಬರೇ ಕೊಲೆ ಮಾಡಿದ್ದು, 30ಕ್ಕೂ ಹೆಚ್ಚು ಪೀಸ್ ಮಾಡಿ ಸಿಂಗಲ್ ಡೋರ್​ನ 165 ಲೀಟರ್ಸ್ ಫ್ರೀಡ್ಜ್​ನಲ್ಲಿ ಮೃತದೇಹದ ತುಂಡುಗಳನ್ನು ಇಡಲಾಗಿತ್ತು. ಮೃತ ಯುವತಿಯನ್ನು ಛತ್ತೀಸ್​ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ.

ಮನೆಯಿಂದ ಬರುತ್ತಿದ್ದ ದುರ್ನಾತ

ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. 2-3 ತಿಂಗಳಿನಿಂದ ಮಹಿಳೆ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹಾಲಕ್ಷ್ಮಿ ಬೇರೆ ರಾಜ್ಯದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಪಿಕಪ್‌ ಡ್ರಾಪ್‌ ಎಂದು ಒಬ್ಬ ಯುವಕ ಆಕೆಯನ್ನು ಕರೆದೊಯ್ಯುತ್ತಿದ್ದ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT