ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಕೊತ್ತನೂರಿನಲ್ಲಿ 22.08 ಎಕರೆ ಅರಣ್ಯ ಭೂಮಿ ವಶಪಡಿಸಿಕೊಳ್ಳಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ.

ಬೆಂಗಳೂರು: ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ. ಆದರೆ, ಈ ಹಿಂದೆ ಬೆಂಗಳೂರು ನಗರದಲ್ಲಿ ಕಾರ್ಯ ನಿರ್ವಹಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಇಲಾಖೆಗೆ ಮಂಜೂರಾದ ಭೂಮಿಯನ್ನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಈ ಸರ್ವೆ ನಂಬರ್'ಗೆ ಸಂಬಂಧಿಸಿದಂತೆ ಪಹಗಣಿ (ಆರ್.ಟಿ.ಸಿ)ಯಲ್ಲಿ ಒಟ್ಟು 13 ಎಕರೆ 10 ಗುಂಟೆ (4 ಎಕರೆ, 1,02 ಎಕರೆ ಮತ್ತು 8,08 ಎಕರೆ) ಬೆಂಗಳೂರುಪ ಜಿಲ್ಲಾಧಿಕಾರಿಗಳ ಆದೇಶದಂತೆ ಎಂ.ಆರ್ ಆಗಿರುತ್ತದೆ. ಸದರಿ 22 ಎಕರೆ 8 ಗುಂಟೆ ಭೂಮಿಯ ಸಂಪೂರ್ಣ ದಾಖಲೆಗಳನ್ನು ಪಡೆದುಕೊಂಡು, ಅರಣ್ಯ ಒತ್ತುವರಿ ತೆರವಿಗೆ 64ಎ ಸೆಕ್ಷನ್ ಅಡಿಯಲ್ಲಿ ಕ್ರಮ ವಹಿಸಲು ಕೂಲೇ ಕ್ರಮ ವಹಿಸುವಂತೆ ಸೂಚಿಸಲು ಮತ್ತು ಈ ಸಂಬಂಧ ಈ ವರೆಗೂ ಕೈಗೊಂಡಿರುವ ಕ್ರಮದ ವಿವರವನ್ನು 2 ದಿನಗಳ ಒಳಗಾಗಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT