ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಕೊತ್ತನೂರಿನಲ್ಲಿ 22.08 ಎಕರೆ ಅರಣ್ಯ ಭೂಮಿ ವಶಪಡಿಸಿಕೊಳ್ಳಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ.

ಬೆಂಗಳೂರು: ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ. ಆದರೆ, ಈ ಹಿಂದೆ ಬೆಂಗಳೂರು ನಗರದಲ್ಲಿ ಕಾರ್ಯ ನಿರ್ವಹಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಇಲಾಖೆಗೆ ಮಂಜೂರಾದ ಭೂಮಿಯನ್ನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಈ ಸರ್ವೆ ನಂಬರ್'ಗೆ ಸಂಬಂಧಿಸಿದಂತೆ ಪಹಗಣಿ (ಆರ್.ಟಿ.ಸಿ)ಯಲ್ಲಿ ಒಟ್ಟು 13 ಎಕರೆ 10 ಗುಂಟೆ (4 ಎಕರೆ, 1,02 ಎಕರೆ ಮತ್ತು 8,08 ಎಕರೆ) ಬೆಂಗಳೂರುಪ ಜಿಲ್ಲಾಧಿಕಾರಿಗಳ ಆದೇಶದಂತೆ ಎಂ.ಆರ್ ಆಗಿರುತ್ತದೆ. ಸದರಿ 22 ಎಕರೆ 8 ಗುಂಟೆ ಭೂಮಿಯ ಸಂಪೂರ್ಣ ದಾಖಲೆಗಳನ್ನು ಪಡೆದುಕೊಂಡು, ಅರಣ್ಯ ಒತ್ತುವರಿ ತೆರವಿಗೆ 64ಎ ಸೆಕ್ಷನ್ ಅಡಿಯಲ್ಲಿ ಕ್ರಮ ವಹಿಸಲು ಕೂಲೇ ಕ್ರಮ ವಹಿಸುವಂತೆ ಸೂಚಿಸಲು ಮತ್ತು ಈ ಸಂಬಂಧ ಈ ವರೆಗೂ ಕೈಗೊಂಡಿರುವ ಕ್ರಮದ ವಿವರವನ್ನು 2 ದಿನಗಳ ಒಳಗಾಗಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT