ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗದವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುತ್ತಿರುವುದು. 
ರಾಜ್ಯ

ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸರ್ಕಾರಕ್ಕೆ ಒಕ್ಕಲಿಗ ನಾಯಕರ ಮನವಿ

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ನೇತೃತ್ವದಲ್ಲಿ ತೆರಳಿದ್ದ ನಿಯೋಗ, ಮುನಿರತ್ನ ವಿರುದ್ಧ ಕಮಿಷನ್‌ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ.

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ನೇತೃತ್ವದಲ್ಲಿ ತೆರಳಿದ್ದ ನಿಯೋಗ, ಮುನಿರತ್ನ ವಿರುದ್ಧ ಕಮಿಷನ್‌ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ. ಹಾಗಾಗಿ, ಎಲ್ಲಾ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಮನವಿ ಮಾಡಿಕೊಂಡರು.

ಈ ಮನವಿಗೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುನಿರತ್ನ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆಗೆ ಮುಂದಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಭೇಟಿಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ಮುನಿರತ್ನ ಒಕ್ಕಲಿಗರನ್ನು ಅವಹೇಳನ ಮಾಡಿದ್ದಾರೆ. ಸಮುದಾಯದ ಮೇಲೆ ದಾಳಿ ನಡೆದಾಗ ಎಲ್ಲರೂ ಎಚ್ಚೆತ್ತುಕೊಂಡು ಖಂಡಿಸಬೇಕು. ರಾಜ್ಯದಲ್ಲಿ ಒಕ್ಕಲಿಗ ಸಮಾಜ ಗೌರವಯುತವಾಗಿ ಬಾಳಿಕೊಂಡು ಬಂದಿದೆ. ವಿನಾಕಾರಣ ಅವಹೇಳನ ಮಾಡುವುದು ಗೌರವಕ್ಕೆ ಚ್ಯುತಿ ತರುತ್ತದೆ ಎಂದು ಹೇಳಿದರು.

ಗುರುವಾ ತಡರಾತ್ರಿವರೆಗೆ ನಗರದ ಖಾಸಗಿ ಹೊಟೇಲ್​​ನಲ್ಲಿ ಕಾಂಗ್ರೆಸ್ ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಸಭೆ ನಡೆಸಿ ಮುನಿರತ್ನ ಜಾತಿ ನಿಂದನೆ ಆರೋಪ ಸಂಬಂಧ ಚರ್ಚೆ ನಡೆಸಿದ್ದರು. ಎಸ್​ಐಟಿ ತನಿಖೆಗೆ ಒತ್ತಾಯಿಸುವ ನಿಟ್ಟಿನಲ್ಲಿ ಸಿಎಂ ಅವರನ್ನು ಭೇಟಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಜಾತಿ ನಿಂದನೆ ಸೇರಿದಂತೆ ಯಾವೆಲ್ಲ ಪ್ರಕರಣಗಳು ಮುನಿರತ್ನ ವಿರುದ್ಧ ದಾಖಲಾಗಿವೆಯೋ ಆ ಎಲ್ಲ ಪ್ರಕರಣಗಳ ಕುರಿತು ಎಸ್​ಐಟಿ ಮೂಲಕ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲು ತೀರ್ಮಾನಿಸಿತ್ತು. ಸಿಎಂ ಭೇಟಿ ಬಳಿಕ ರಾಜ್ಯಪಾಲರ ಅಂಗಳಕ್ಕೂ ಪ್ರಕರಣವನ್ನು ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel