ಸಂಗ್ರಹ ಚಿತ್ರ 
ರಾಜ್ಯ

8,000 ರಸ್ತೆ ಗುಂಡಿಗಳ ಮುಚ್ಚಲಾಗಿದೆ; ನವೆಂಬರ್‌ನಲ್ಲಿ 660 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ: BBMP

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬಿಬಿಎಂಪಿ ದಕ್ಷಿಣ ವಲಯದಲ್ಲಿರುವ ಅಪಯಕಾರಿ ಮರ ತೆರವು ಕಾರ್ಯಾಚರಣೆಯನ್ನು ಶುಕ್ರವಾರ ಪರಿಶೀಲನೆ ನಡೆಸಿದರು.

ಬೆಂಗಳೂರು: ಸರ್ಕಾರ ನೀಡಿದ್ದ 15 ಗಡುವಿನಲ್ಲಿ 2,700 ರಸ್ತೆಗಳ ಗುಂಡಿಗಳ ಜೊತೆಗೆ ಪ್ರತಿನಿತ್ಯ ಬರುವ ದೂರುಗಳ ಮೂಲಕವೂ 8,000 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಶುಕ್ರವಾರ ಹೇಳಿದೆ.

ನಿನ್ನೆಯಷ್ಟೇ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬಿಬಿಎಂಪಿ ದಕ್ಷಿಣ ವಲಯದಲ್ಲಿರುವ ಅಪಯಕಾರಿ ಮರ ತೆರವು ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ನಗರದಲ್ಲಿ 8,000ಕ್ಕೂ ಹೆಚ್ಚು ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಇಲ್ಲದೆ, ರೂ.660 ಕೋಟಿ ವೆಚ್ಚದಲ್ಲಿ ನವೆಂಬಲ್ ನಲ್ಲಿ 459 ಕಿಮೀ ವ್ಯಾಪ್ತಿಯ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಪ್ರಮುಖ ರಸ್ತೆಗಳಲ್ಲಿ ಕಳೆದ ಕೆಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಹೀಗಾಗಿ 6000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಬಳಿಕ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಮಾತನಾಡಿದ ಅವರು, ಅನಧಿಕೃತ ಕೇಬಲ್‌ಗಳನ್ನು ತೆರವುಗೊಳಿಸುವಂತೆ ಹಾಗೂ ಫುಟ್‌ಪಾತ್‌ ಒತ್ತುವರಿ ಮಾಡಿಕೊಂಡಿರುವ ದ್ವಿಚಕ್ರ ವಾಹನ ಶೋರೂಂ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೋವಿಂದಪುರದಲ್ಲಿನ ರಸ್ತೆ ಗುಂಡಿಗೆ ಯುವಕನೋರ್ವನ ಸಾವು ಕುರಿತು ಮಾತನಾಡಿ, ಧ್ವಜ ಕಟ್ಟುವ ವೇಳೆ ಯುವಕ ಗುಂಡಿಗೆ ಬಿದ್ದಿದ್ದಾನೆಂದು ಹೇಳಿದರು.

ಸಂಪರ್ಕರಹಿತ ಖಾತಾ ವಿತರಣೆಯ ಕುರಿತು ಪ್ರತಿಕ್ರಿಯಿಸಿ, ಜಿಪಿಎಸ್ ಟ್ಯಾಗ್ ಮಾಡಲು ಮತ್ತು ಆಸ್ತಿಗಳನ್ನು ಅಪ್‌ಲೋಡ್ ಮಾಡಲು 200 ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಕಾರ್ಯಾಚರಣೆಯು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ, Rukmini Vasanth ಬೆಂಬಲ!

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ! Video

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ': Sam Curran ಅತ್ಯುತ್ಸಾಹ!

SCROLL FOR NEXT