ಹತ್ಯೆಯಾದ ಮಹಿಳೆ ಮಹಾಲಕ್ಷ್ಮಿ 
ರಾಜ್ಯ

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಹತ್ಯೆ: ಮೃತದೇಹವನ್ನು 28 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಮಹಾಲಕ್ಷ್ಮಿ ಮೂಲತಃ ನೇಪಾಳದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್(Shraddha Walkar) ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆಯಾಗಿದ್ದು, ಮೃತ ದೇಹವನ್ನು 28 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಡಲಾಗಿದೆ.

ಮಲ್ಲೇಶ್ವರಂನ ಮನೆಯೊಂದರಲ್ಲಿ 29 ವರ್ಷದ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ ತಿಳಿಸಿವೆ.

ಹತ್ಯೆಯಾದ ಮಹಿಳೆಯನ್ನು ಮಹಾಲಕ್ಷ್ಮಿ ಎಂದು ಗುರುತಿಸಲಾಗಿದ್ದು, ವೈಯಾಲಿಕಾವಲ್‌ನಲ್ಲಿರುವ ಅವರ ಫ್ಲಾಟ್‌ನಲ್ಲಿ ಕೊಲೆಯ ಬಳಿಕ ಮೃತದೇಹವನ್ನು 28 ತುಂಡುಗಳನ್ನಾಗಿ ಕತ್ತರಿಸಿ ಒಂದೇ ಬಾಗಿಲಿನ 165-ಲೀಟರ್ ಫ್ರಿಡ್ಜ್ ನಲ್ಲಿಡಲಾಗಿದೆ.

ಐದು ವರ್ಷಗಳ ಹಿಂದೆ ಪತಿ ಹೇಮಂತ್ ದಾಸ್ ನಿಂದ ಬೇರ್ಪಟ್ಟಿದ್ದ ಮಹಾಲಕ್ಷ್ಮಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು ಮತ್ತು ವೀರಣ್ಣ ಭವನ ಸಮೀಪದ ಪೈಪ್ ಲೈನ್ ರಸ್ತೆಯ 6ನೇ ಕ್ರಾಸ್ ನಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಾಗಿದ್ದರು. ಅವರ ನಾಲ್ಕು ವರ್ಷದ ಮಗಳು ದಾಸ್ ಅವರೊಂದಿಗೆ ವಾಸಿಸುತ್ತಿದ್ದರು. ಮಗಳು ತಾಯಿಯೊಂದಿಗೆ ಸಮಯ ಕಳೆಯಲು ಪ್ರತಿ ಹದಿನೈದು ದಿನಗಳಿಗೊಮ್ಮೆ ಮಹಾಲಕ್ಷ್ಮಿಗೆ ಭೇಟಿಗೆ ದಾಸ್ ಆಗಮಿಸುತ್ತಿದ್ದರು. ಆದರೆ ಸೆಪ್ಟೆಂಬರ್ 2 ರ ನಂತರ, ಮಹಾಲಕ್ಷ್ಮಿ ಅವರ ಫೋನ್ ಸ್ವಿಚ್ ಆಫ್ ಆಗಿತ್ತು, ಮತ್ತು ದಾಸ್ ಶನಿವಾರ ತಮ್ಮ ಮಗಳೊಂದಿಗೆ ಪತ್ನಿಯನ್ನು ನೋಡಲು ಬಂದಿದ್ದರು. ಈ ವೇಳೆ ನೆರೆಹೊರೆಯವರು ಮಹಾಲಕ್ಷ್ಮಿ ಅವರ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿರುವುದು ಅವರ ಗಮನಕ್ಕೆ ಬಂದಿದೆ. ತಕ್ಷಣ ಮಹಾಲಕ್ಷ್ಮಿ ಅವರ ತಾಯಿ ಮತ್ತು ಸಹೋದರಿಗೆ ಮಾಹಿತಿ ನೀಡಿದ್ದಾರೆ.

ನಂತರ ದಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಮನೆಗೆ ಆಗಮಿಸಿ ಬಾಗಿಲನ್ನು ಒಡೆದು ನೋಡಿದಾಗ, ರೆಫ್ರಿಜರೇಟರ್‌ನಲ್ಲಿ ಮೃತದೇಹ ಪತ್ತೆಯಾಗಿದೆ.

ದೇಹವನ್ನು ಫ್ರಿಡ್ಜ್​ನಿಂದ ಹೊರ ತೆಗೆದ ಬಳಿಕ ದೇಹದ ತುಂಡುಗಳ ಲೆಕ್ಕ ಬರೆದುಕೊಂಡಿದ್ದು, 28 ಪೀಸ್​ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಮೃತ ದೇಹ ಮತ್ತು ಸ್ಥಳ ಪರಿಶೀಲನೆ ಮುಕ್ತಾಯವಾಗಿದ್ದು, ಮೃತ ದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಳೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಬಂಧನಕ್ಕಾಗಿ ಹೈಗ್ರೌಂಡ್ಸ್, ಶೇಷಾದ್ರಿಪುರ ಮತ್ತು ವೈಯಾಲಿಕಾವಲ್ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳನ್ನು ಒಳಗೊಂಡ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಮಹಾಲಕ್ಷ್ಮಿ ಮೂಲತಃ ನೇಪಾಳದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಪಿಕಪ್‌ ಡ್ರಾಪ್‌ ಎಂದು ಒಬ್ಬ ಯುವಕ ಆಕೆಯನ್ನು ಕರೆದೊಯ್ಯುತ್ತಿದ್ದ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel