ಮೃತ ರೇಣುಕಾಸ್ವಾಮಿ(ಸಂಗ್ರಹ ಚಿತ್ರ) 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಕೇಸು: ಮೂವರಿಗೆ ಜಾಮೀನು ಮಂಜೂರು; ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಶವ ಸಿಕ್ಕಿದ ಮರುದಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಇವರು ಬಂದು ಅಂದರೆ ಜೂನ್ 10ಕ್ಕೆ ಶರಣಾಗಿದ್ದರು.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್​ ಅವರ ಜಾಮೀನು ಅರ್ಜಿ ವಿಚಾರಣೆ ಕ್ರಮವಾಗಿ ಸೆಪ್ಟೆಂಬರ್​ 25 ಮತ್ತು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆಯಾಗಿದೆ.

ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಇಂದು ಆದೇಶ ನೀಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ಅಂತ್ಯವಾಗಿ ಇತ್ತೀಚೆಗೆ ಪೊಲೀಸರು ಚಾರ್ಜ್​ಶೀಟ್​ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಎ15, 16 ಮತ್ತು ಎ 17 ಆರೋಪಿಗಳಿಗೆ ಜಾಮೀನು: ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದ್ದು, ಮೂವರಿಗೆ ಇಂದು ಜಾಮೀನು ಸಿಕ್ಕಿದೆ. ಎ15 ಆರೋಪಿ ನಿಖಿಲ್ ನಾಯ್ಕ್, ಎ16 ಆರೋಪಿಯಾಗಿದ್ದ ಕೇಶವಮೂರ್ತಿ ಹಾಗೂ ಎ17 ಆರೋಪಿ ಕಾರ್ತಿಕ್ ಗೆ ಹೈಕೋರ್ಟ್ ನಿಂದ ಜಾಮೀನು ಸಿಕ್ಕಿದೆ.

ರೇಣುಕಾಸ್ವಾಮಿ ಹತ್ಯೆ ಕೇಸಿನಲ್ಲಿ ಪ್ರಮುಖ ಆರೋಪಿಗಳಿಂದ ಹಣದ ಆಮಿಷಕ್ಕೆ ಒಳಗಾಗಿ ಶವ ಸಾಗಿಸುವಾಗ, ಪೊಲೀಸರಿಗೆ ಶರಣಾಗುವಲ್ಲಿ ಮಾತ್ರ ಇವರ ಪಾತ್ರವಿತ್ತು, ಹತ್ಯೆಗೂ ಇವರಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಹೇಳಲಾಗಿತ್ತು.

ರೇಣುಕಾಸ್ವಾಮಿ ಶವ ಸಿಕ್ಕಿದ ಮರುದಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಇವರು ಬಂದು ಅಂದರೆ ಜೂನ್ 10ಕ್ಕೆ ಶರಣಾಗಿದ್ದರು. ನಾವೇ ಕೊಲೆ ಮಾಡಿದ್ದಾಗಿ ಆರಂಭದಲ್ಲಿ ಹೇಳಿದ್ದರು. ಕೊನೆಗೆ ಪೊಲೀಸರು ಅವರ ಬಾಯಿ ಬಿಡಿಸಿದಾಗ ಸತ್ಯ ಹೊರಬಂದಿತ್ತು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT