ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿರುವ ಸಿಎಂ ಸಿದ್ದರಾಮಯ್ಯ. 
ರಾಜ್ಯ

ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳ ಬದಲಾಯಿಸಲು ಸರ್ಕಾರ ಮುಂದು!

ತುಂಗಭದ್ರಾ ಜಲಾಶಯ ಕರ್ನಾಟಕದ 9,26,438 ಎಕರೆ, ಆಂಧ್ರಪ್ರದೇಶದಲ್ಲಿ 6,25,097 ಎಕರೆ ಮತ್ತು ತೆಲಂಗಾಣದಲ್ಲಿ 87,000 ಎಕರೆ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರಮುಖ ನೀರಿನ ಮೂಲವಾಗಿದೆ.

ಮುನಿರಾಬಾದ್ (ಕೊಪ್ಪಳ): ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಆದಷ್ಟು ಬೇಗ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಬಳಿ ಚರ್ಚೆ ನಡೆಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು. ಇದರ ಮೂಲಕ ನಮ್ಮ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಕ್ರೆಸ್ಟ್ ಗೇಟ್ ಹಾಳಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ, ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ನಿರಂತರವಾಗಿ ಸಂವಹನ ನಡೆಸುತ್ತಿದ್ದೇನೆ. ದೇವರ ದಯೆ ಮತ್ತು ತಜ್ಞರ ತಂಡದಿಂದ ಗೇಟ್‌ನಲ್ಲಿ ತಾತ್ಕಾಲಿಕ ಸ್ಟಾಪ್ ಲಾಗ್‌ಗಳನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ.

ತುಂಗಭದ್ರಾ ಜಲಾಶಯ ಕರ್ನಾಟಕದ 9,26,438 ಎಕರೆ, ಆಂಧ್ರಪ್ರದೇಶದಲ್ಲಿ 6,25,097 ಎಕರೆ ಮತ್ತು ತೆಲಂಗಾಣದಲ್ಲಿ 87,000 ಎಕರೆ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರಮುಖ ನೀರಿನ ಮೂಲವಾಗಿದೆ. ಕ್ರೆಸ್ಟ್ ಗೇಟ್ ಮುರಿದ ನಂತರ ಮೂರು ರಾಜ್ಯಗಳ ರೈತರು ಆತಂಕಕ್ಕೊಳಗಾಗಿದ್ದರು. ಆ ವೇಳೆ ಜಲಾಶಯ ತುಂಬಲಿದ್ದು, ಬಾಗಿನ ಅರ್ಪಿಸಲು ಬರುತ್ತೇನೆಂದು ಹೇಳಿದ್ದೆ. ಅದೇ ರೀತಿ ಇಂದು ಬಾಗಿನ ಅರ್ಪಿಸಿದ್ದೇನೆಂದು ತಿಳಿಸಿದರು.

"ಕ್ರೆಸ್ಟ್ ಗೇಟ್ ಮುರಿದ ನಂತರ, ಬಿಜೆಪಿ ಮತ್ತು ಇತರ ನಾಯಕರು ಘಟನೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸಿದರ್ದರು. ಆದರೆ ಇದು ತಾಂತ್ರಿಕ ದೋಷವೆಂದು ತಿಳಿದುಬಂದಿದೆ. ತುಂಗಭದ್ರಾ ಅಣೆಕಟ್ಟು ರಾಜ್ಯದ ಅತ್ಯಂತ ಹಳೆಯದಾಗಿದ್ದು, ಇದನ್ನು 1953 ರಲ್ಲಿ ನಿರ್ಮಿಸಲಾಗಿತ್ತು. ಪ್ರತಿ 50 ವರ್ಷಗಳಿಗೊಮ್ಮೆ ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಬೇಕು. ಪ್ರಸ್ತುತ ಎದುರಾಗದ್ದ ಪರಿಸ್ಥಿತಿ ಎಲ್ಲರಿಗೂ ಪಾಠವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಆಗಸ್ಟ್ 10ರಂದು 19ನೇ ಗೇಟ್ ಕಿತ್ತು ಹೋದಾಗ ಜಿಲ್ಲಾ ಮಂತ್ರಿಗಳು, ಎಂಡಿಯವರು ಕರೆ ಮಾಡಿ ಡ್ಯಾಮ್ ಅಪಾಯದಲ್ಲಿದೆ ಎಂದು ಪರಿಸ್ಥಿತಿಯ ಬಗ್ಗೆ ತಿಳಿಸಿದರು. ಆತಂಕ ಪಡಬೇಡಿ ಎಂದು ಹೇಳಿ ಮಾರನೇ ದಿನವೇ ಸ್ಥಳಕ್ಕೆ ಭೇಟಿ ನೀಡಿದೆ. ಅಧಿಕಾರಿಗಳು ಹಾಗೂ ತಾಂತ್ರಿಕ ಪರಿಣಿತರ ಹತ್ತಿರ ಮಾತನಾಡಿ ಎಲ್ಲಾ ಗೇಟ್ ಗಳಿಂದ ನೀರನ್ನು ಹರಿಸಿ ಎಂದು ಹೇಳಿ ತಕ್ಷಣ ಗೇಟ್ ತಯಾರು ಮಾಡುವ ಸಂಸ್ಥೆಗಳ ಜೊತೆ ಚರ್ಚೆ ನಡೆಸಿ ಗೇಟ್ ತಯಾರಿಗೆ ಆದೇಶ ನೀಡಿದೆ. ಡ್ಯಾಮಿನ ಗೇಟ್ ಕಿತ್ತು ಹೋದಂತಹ ಕಷ್ಟಕಾಲದಲ್ಲಿ ನಾವು ಎದೆಗುಂದದೆ ರೈತರ ಜಮೀನಿಗೆ ಮತ್ತೆ ನೀರನ್ನು ಕೊಡುವಂತಹ ಅವಕಾಶ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ನಮ್ಮ ಭಾಗ್ಯ. ಈ ವರ್ಷದೊಳಗೆ ಜಲಾಶಯದಲ್ಲಿ 33 ಹೊಸ ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT