ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

ಮುನಿರತ್ನ ವಿರುದ್ಧ ತನಿಖೆ ನಡೆಸಲು SITಗೆ ಸಂಪೂರ್ಣ ಸ್ವಾತಂತ್ರ್ಯವಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಪಾಲರು ಆರ್ಕವತಿ ವರದಿ ಕೇಳಿದ ವಿಚಾರ ಕುರಿತು ಮಾತನಾಡಿ, ರಾಜ್ಯಪಾಲರು ಬರೆದಿರುವ ಪತ್ರ ನಾನಿನ್ನು ಗಮನಿಸಿಲ್ಲ, ವಿಚಾರಿಸುವೆ ಎಂದರು.

ಕೊಪ್ಪಳ: ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುನಿರತ್ನ ಅವರು ಸಾಕಷ್ಟು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಎಫ್ಐಆರ್ ದಾಖಲಾಗಿದೆ. ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಅವರಿಗೆ ಕಾನೂನು ಉಲ್ಲಂಘಿಸಿ ಎಂದು ನಾವು ಹೇಳಿಲ್ಲವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಭಾನುವಾರ ತಾಲೂಕಿನ ಬಸಾಪೂರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಮುನಿರತ್ನನಿಗೆ ಅಪರಾಧ ಮಾಡು ಎಂದು ನಾವು ಹೇಳಿದ್ದೆವಾ?...ಮುನಿರತ್ನ ಮೇಲೆ ಮೂರು ಪ್ರಕರಣ ದಾಖಲಾಗಿದೆ. ಶಾಸಕರ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ, ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪದ ಮೇಲೆ ಕಾನೂನು ಪ್ರಕಾರ ಮುನಿರತ್ನ ಅವರನ್ನು ಬಂಧಿಸಲಾಗಿದೆ, ನಿವೃತ್ತ ಐಪಿಎಸ್ ಅಧಿಕಾರಿ ಬಿಕೆ ಸಿಂಗ್ ಅವರಿಗೆ ತನಿಖೆ ನೇತೃತ್ವ ವಹಿಸಲಾಗಿದೆ.

ಸರ್ಕಾರ ಯಾರ ವಿರುದ್ಧವೂ ಇಲ್ಲ. ನಾವು ಯಾರನ್ನೂ ಗುರಿಯಾಗಿಸಿಕೊಂಡಿಲ್ಲ ಅಥವಾ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಶಾಸಕರ ವಿರುದ್ಧ ಮೂರು ಎಫ್‌ಐಆರ್‌ಗಳು ದಾಖಲಾಗಿವೆ ಮತ್ತು ಈಗ ಕಾನೂನು ಕ್ರಮ ಕೈಗೊಳ್ಳುವ ಸಮಯ ಬಂದಿದೆ. ಪೊಲೀಸರು ಮತ್ತು ಎಸ್‌ಐಟಿಗೆ ತನಿಖೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯ ಪಾಲರು ಆರ್ಕವತಿ ವರದಿ ಕೇಳಿದ ವಿಚಾರ ಕುರಿತು ಮಾತನಾಡಿ, ರಾಜ್ಯಪಾಲರು ಬರೆದಿರುವ ಪತ್ರ ನಾನಿನ್ನು ಗಮನಿಸಿಲ್ಲ, ವಿಚಾರಿಸುವೆ ಎಂದರು.

ರಾಜ್ಯಪಾಲರು ಆರ್ಕಾವತಿ ಬಡಾವಣೆ ಕುರಿತು ಬರೆದಿರುವ ವಿಚಾರ ಪತ್ರಿಕೆಯಲ್ಲಿ ಓದಿರುವೆ. ಆರ್ಕಾವತಿ ಬಡಾವಣೆ ವಿಚಾರದಲ್ಲಿ ರಿಡ್ಯೂ ಅಂತ ಹೇಳಿದ್ದು ಸುಪ್ರೀಂ ಕೋರ್ಟ್, ನಾವಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel