ಮೇಲ್ಛಾವಣಿ ಕಾಂಕ್ರೀಟ್ ಬಿದ್ದ ಅಂಗನವಾಡಿ ಕೇಂದ್ರ 
ರಾಜ್ಯ

ಗಂಗಾವತಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕಾಂಕ್ರೀಟ್ ಕಳಚಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯ

ಇಂದು ಮುಂಜಾನೆ ಅಂಗನವಾಡಿಗೆ ಎಂದಿನಂತೆ 20ಕ್ಕೂ ಹೆಚ್ಚು ಮಕ್ಕಳು ಬಂದಿದ್ದರು. ಒಳಗೆ ಕುಳಿತು ಆಟ-ಪಾಠಗಳಲ್ಲಿ ತೊಡಗಿದ್ದರು.

ಕೊಪ್ಪಳ: ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಉದುರಿ ಬಿದ್ದು ನಾಲ್ವರು ಮಕ್ಕಳು ಗಾಯಗೊಂಡ ಘಟನೆ ಇಂದು ಸೋಮವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಮಹಬೂಬ್ ನಗರದಲ್ಲಿರುವ 11 ನೇ ಅಂಗನವಾಡಿ ಕೇಂದ್ರದ ಮೇಲ್ಛಾವಣಿಯ ಕಾಂಕ್ರಿಟ್ ಉದುರಿ ಬಿದ್ದಿದೆ.

ಇಂದು ಮುಂಜಾನೆ ಅಂಗನವಾಡಿಗೆ ಎಂದಿನಂತೆ 20ಕ್ಕೂ ಹೆಚ್ಚು ಮಕ್ಕಳು ಬಂದಿದ್ದರು. ಒಳಗೆ ಕುಳಿತು ಆಟ-ಪಾಠಗಳಲ್ಲಿ ತೊಡಗಿದ್ದರು. ಆಗ ಇದ್ದಕ್ಕಿದ್ದಂತೆ ಕಾಂಕ್ರೀಟ್ ಉದುರಿ ಬಿದ್ದಿದೆ. ಇದರಿಂದ ನಾಲ್ಕು ಮಕ್ಕಳ ತಲೆ ಮತ್ತು ಕಾಲುಗಳಿಗೆ ಗಾಯವಾಗಿವೆ.

ಮೆಹಬೂಬ್ ನಗರದ ಅಮನ್, ಮನ್ವಿತ್,ಮದ೯ನ್,‌ ಸುರಕ್ಷಾ ಎಂಬ ಮಕ್ಕಳು ಗಾಯಗೊಂಡಿದ್ದು, ಅವರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿವೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ನಗರಸಭೆ ಅಧ್ಯಕ್ಷ ಮತ್ತು ಸದಸ್ಯರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT