ಸಾಂದರ್ಭಿಕ ಚಿತ್ರ 
ರಾಜ್ಯ

ಅಪ್ರಾಪ್ತೆ, ಆದ್ರೆ ದಿಟ್ಟ ಹೋರಾಟಗಾರ್ತಿ! ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದಾಳೆ.

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿ, ಇತರೆ ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.

ಈ ಕುರಿತು ವರದಿಗಾರರೊಂದಿಗೆ ದೂರವಾಣಿಯೊಂದಿಗೆ ಮಾತನಾಡಿರುವ ಬಾಲಕಿ, ಬಡತನದಿಂದಾಗಿ ತಾಯಿ ತನ್ನ ಮೂವರು ಅಕ್ಕಂದಿರಿಗೆ ಕೆಲವು ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದಾರೆ. ತನ್ನ ಅಕ್ಕಂದಿರುವ ಅನುಭವಿಸುತ್ತಿರುವ ಆರೋಗ್ಯದ ಸಮಸ್ಯೆಗಳನ್ನು ನೋಡಿದಾಗ, ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಬಾಲ್ಯ ವಿವಾಹವು ಕೆಟ್ಟದು ಎಂಬುದು ಅರಿವಾಯಿತು ಎಂದು ಹೇಳಿದ್ದಾಳೆ.

ಆಕೆಯ ತಂದೆ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು, ಕೃಷಿ ಕೂಲಿ ಕಾರ್ಮಿಕರಾಗಿರುವ ತಾಯಿ ನಾಲ್ಕು ಹೆಣ್ಣುಮಕ್ಕಳು ಮತ್ತು ಒಬ್ಬ ಗಂಡು ಕುಟುಂಬಕ್ಕೆ ಏಕೈಕ ಆಧಾರವಾಗಿದ್ದಾರೆ. ಸರ್ಕಾರದ ಸವಲತ್ತುಗಳ ಕಾರಣದಿಂದ ಆಕೆಯ ತಾಯಿ ಬಾಲಕಿಯನ್ನು ಓದಲು ಬಿಟ್ಟಿದ್ದಾರೆ. ಆದರೆ ಬಡತನದ ಕಾರಣದಿಂದ ತನ್ನ ತಾಯಿಯ ಒಂಬತ್ತು ಸಹೋದರರ ಪೈಕಿ 25 ವರ್ಷ ವಯಸ್ಸಿನ ಸೋದರ ಮಾವನಿಗೆ ಆಕೆಯನ್ನು ಕೊಟ್ಟು ಮದುವೆ ಮಾಡಲು ಕುಟುಂಬ ನಿರ್ಧರಿಸಿತು.

ಆದರೆ ಬಾಲಕಿ ಇದನ್ನು ವಿರೋಧಿಸಿ ತಾನು ವಯಸ್ಕಳಾಗಿ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದು ತಾಯಿ ಮತ್ತು ಸೋದರ ಮಾವನಿಗೆ ಹೇಳಿದ್ದಾಳೆ. ಆದರೂ ಅವರು ತಲೆಕೆಡಿಸಿಕೊಳ್ಳದೆ ಮದುವೆ ತಯಾರಿಗೆ ಮುಂದಾಗಿದ್ದಾರೆ.

ಅಪ್ರಾಪ್ತ ಬಾಲಕಿಗೆ ತಿಂಗಳಿಗೆ 4 ಸಾವಿರ ರೂ: ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದು, ಕೊಸಾಂಬೆ ಗಮನಕ್ಕೆ ತರಲಾಗಿದೆ.

ಭಾನುವಾರ ತಹಶೀಲ್ದಾರ್ ದತ್ತಾತ್ರೇಯ ಗಡಾದ, ತಾಲ್ಲೂಕು ಪಂಚಾಯಿತಿ ಸಿಇಒ ರಮೇಶ ಸುಲ್ಫಿ, ಸಿಡಿಪಿಒ ಗೌತಮ್ ಸಿಂಧೆ, ಬಿಇಒ ಶಿವರುದ್ರಯ್ಯ, ಪಿಎಸ್‌ಐ ಜಯಶ್ರೀ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪುರ ಅವರೊಂದಿಗೆ ಗ್ರಾಮಕ್ಕೆ ದೌಡಾಯಿಸಿದ್ದು, ಬಾಲಕಿಯ ತಾಯಿ, ಸೋದರ ಮಾವ ಮತ್ತು ಗ್ರಾಮದ ಹಿರಿಯರನ್ನು ಭೇಟಿ ಮಾಡಿತು.

ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮನೆಯವರಿಗೆ ಮನವರಿಕೆ ಮಾಡಿಕೊಟ್ಟು, ಮದುವೆ ಮಾಡಿದರೆ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಹುಡುಗಿ ವಯಸ್ಕಳಾಗುವವರೆಗೆ ಮದುವೆ ಮಾಡಿಸುವುದಿಲ್ಲ ಎಂದು ತಾಯಿಯಿಂದ ವಾಗ್ದಾನ ಪಡೆದ ಅಧಿಕಾರಿಗಳ ತಂಡ ಬಾಲಕಿಯನ್ನು ಅಭಿನಂದಿಸಿತು. ಆಕೆಗೆ ಪ್ರತಿ ತಿಂಗಳು ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕೊಸಾಂಬೆ ಸೂಚಿಸಿದರು. ನಮ್ಮ ಹಳ್ಳಿಗೆ ಸಹಾಯ ಮಾಡಲು ನಾನು ಪೊಲೀಸ್ ಅಧಿಕಾರಿಯಾಗಲು ಬಯಸುತ್ತೇನೆ ಎಂದು ಬಾಲಕಿ ಹೇಳಿದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT