ಸಾಂದರ್ಭಿಕ ಚಿತ್ರ 
ರಾಜ್ಯ

ಅಪ್ರಾಪ್ತೆ, ಆದ್ರೆ ದಿಟ್ಟ ಹೋರಾಟಗಾರ್ತಿ! ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದಾಳೆ.

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿ, ಇತರೆ ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.

ಈ ಕುರಿತು ವರದಿಗಾರರೊಂದಿಗೆ ದೂರವಾಣಿಯೊಂದಿಗೆ ಮಾತನಾಡಿರುವ ಬಾಲಕಿ, ಬಡತನದಿಂದಾಗಿ ತಾಯಿ ತನ್ನ ಮೂವರು ಅಕ್ಕಂದಿರಿಗೆ ಕೆಲವು ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದಾರೆ. ತನ್ನ ಅಕ್ಕಂದಿರುವ ಅನುಭವಿಸುತ್ತಿರುವ ಆರೋಗ್ಯದ ಸಮಸ್ಯೆಗಳನ್ನು ನೋಡಿದಾಗ, ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಬಾಲ್ಯ ವಿವಾಹವು ಕೆಟ್ಟದು ಎಂಬುದು ಅರಿವಾಯಿತು ಎಂದು ಹೇಳಿದ್ದಾಳೆ.

ಆಕೆಯ ತಂದೆ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು, ಕೃಷಿ ಕೂಲಿ ಕಾರ್ಮಿಕರಾಗಿರುವ ತಾಯಿ ನಾಲ್ಕು ಹೆಣ್ಣುಮಕ್ಕಳು ಮತ್ತು ಒಬ್ಬ ಗಂಡು ಕುಟುಂಬಕ್ಕೆ ಏಕೈಕ ಆಧಾರವಾಗಿದ್ದಾರೆ. ಸರ್ಕಾರದ ಸವಲತ್ತುಗಳ ಕಾರಣದಿಂದ ಆಕೆಯ ತಾಯಿ ಬಾಲಕಿಯನ್ನು ಓದಲು ಬಿಟ್ಟಿದ್ದಾರೆ. ಆದರೆ ಬಡತನದ ಕಾರಣದಿಂದ ತನ್ನ ತಾಯಿಯ ಒಂಬತ್ತು ಸಹೋದರರ ಪೈಕಿ 25 ವರ್ಷ ವಯಸ್ಸಿನ ಸೋದರ ಮಾವನಿಗೆ ಆಕೆಯನ್ನು ಕೊಟ್ಟು ಮದುವೆ ಮಾಡಲು ಕುಟುಂಬ ನಿರ್ಧರಿಸಿತು.

ಆದರೆ ಬಾಲಕಿ ಇದನ್ನು ವಿರೋಧಿಸಿ ತಾನು ವಯಸ್ಕಳಾಗಿ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದು ತಾಯಿ ಮತ್ತು ಸೋದರ ಮಾವನಿಗೆ ಹೇಳಿದ್ದಾಳೆ. ಆದರೂ ಅವರು ತಲೆಕೆಡಿಸಿಕೊಳ್ಳದೆ ಮದುವೆ ತಯಾರಿಗೆ ಮುಂದಾಗಿದ್ದಾರೆ.

ಅಪ್ರಾಪ್ತ ಬಾಲಕಿಗೆ ತಿಂಗಳಿಗೆ 4 ಸಾವಿರ ರೂ: ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದು, ಕೊಸಾಂಬೆ ಗಮನಕ್ಕೆ ತರಲಾಗಿದೆ.

ಭಾನುವಾರ ತಹಶೀಲ್ದಾರ್ ದತ್ತಾತ್ರೇಯ ಗಡಾದ, ತಾಲ್ಲೂಕು ಪಂಚಾಯಿತಿ ಸಿಇಒ ರಮೇಶ ಸುಲ್ಫಿ, ಸಿಡಿಪಿಒ ಗೌತಮ್ ಸಿಂಧೆ, ಬಿಇಒ ಶಿವರುದ್ರಯ್ಯ, ಪಿಎಸ್‌ಐ ಜಯಶ್ರೀ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪುರ ಅವರೊಂದಿಗೆ ಗ್ರಾಮಕ್ಕೆ ದೌಡಾಯಿಸಿದ್ದು, ಬಾಲಕಿಯ ತಾಯಿ, ಸೋದರ ಮಾವ ಮತ್ತು ಗ್ರಾಮದ ಹಿರಿಯರನ್ನು ಭೇಟಿ ಮಾಡಿತು.

ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮನೆಯವರಿಗೆ ಮನವರಿಕೆ ಮಾಡಿಕೊಟ್ಟು, ಮದುವೆ ಮಾಡಿದರೆ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಹುಡುಗಿ ವಯಸ್ಕಳಾಗುವವರೆಗೆ ಮದುವೆ ಮಾಡಿಸುವುದಿಲ್ಲ ಎಂದು ತಾಯಿಯಿಂದ ವಾಗ್ದಾನ ಪಡೆದ ಅಧಿಕಾರಿಗಳ ತಂಡ ಬಾಲಕಿಯನ್ನು ಅಭಿನಂದಿಸಿತು. ಆಕೆಗೆ ಪ್ರತಿ ತಿಂಗಳು ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕೊಸಾಂಬೆ ಸೂಚಿಸಿದರು. ನಮ್ಮ ಹಳ್ಳಿಗೆ ಸಹಾಯ ಮಾಡಲು ನಾನು ಪೊಲೀಸ್ ಅಧಿಕಾರಿಯಾಗಲು ಬಯಸುತ್ತೇನೆ ಎಂದು ಬಾಲಕಿ ಹೇಳಿದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT