ಸುಪ್ರೀಂ ಕೋರ್ಟ್ 
ರಾಜ್ಯ

ಗೋರಿಪಾಳ್ಯ ಹೇಳಿಕೆ: 'ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ'; ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ Supreme Court!

ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ.

ನವದೆಹಲಿ: ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್‌ 'ಸು ಮೋಟೊ' (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿತ್ತು. ನ್ಯಾಯಮೂರ್ತಿ ಶ್ರೀಶಾನಂದ ವಿರುದ್ಧದ 'ಸು ಮೋಟೊ' ಪ್ರಕರಣದ ವಿಚಾರಣೆಯಲ್ಲಿ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿತ್ತು.

ಇದೀಗ ನ್ಯಾಯಮೂರ್ತಿ ಶ್ರೀಶಾನ೦ದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ವು ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

ಅಂತೆಯೇ ಈ ವೇಳೆ “ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಹೇಳಿದ್ದಾರೆ.

ಅಲ್ಲದೆ “ನ್ಯಾಯ ಮತ್ತು ನ್ಯಾಯಾಂಗದ ಘನತೆಯ ಹಿತಾಸಕ್ತಿಯಿಂದಾಗಿ 'ಸು ಮೋಟೊ' ಪ್ರಕರಣವನ್ನು ಮುಕ್ತಾಯಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ. ಅಂತಹ ಅವಲೋಕನಗಳು ಪಕ್ಷಪಾತದಿಂದ ಕೂಡಿರಬಾರದು. ಎಲ್ಲರನ್ನು ಒಳಗೊಳ್ಳುವಂತಿರಬೇಕು” ಎಂದು ಸಿಜೆಐ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT