ಲೋಕಾಯುಕ್ತ ದಾಳಿ 
ರಾಜ್ಯ

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಇದರಂತೆ ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು.

ಬೆಂಗಳೂರು: ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಇದರಂತೆ ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಹಲವು ಲೋಪದೋಷಗಳ ಕಂಡು ಬಂದಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.

ದಾಳಿ ವೇಳೆ ದಾಖಲೆ ಇಲ್ಲದೆ 2 ಲಕ್ಷ ಹಣ, ಗಾಂಜಾ ಮತ್ತು ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ವರದಿಗಳು ತಿಳಿಸಿವೆ.

ಲೊಕಾಯುಕ್ತ ಕಚೇರಿಗೆ ಸುಮಾರು 132 ದೂರುಗಳು ಬಂದಿವೆ. ಅದೆಲ್ಲವನ್ನೂ ವಿಚಾರಣೆ ಮಾಡಲಾಗಿದ್ದು, ಜೊತೆಗೆ ಅಬಕಾರಿ ಕಚೇರಿಯ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಲು ಸರ್ಚಿಂಗ್ ಮಾಡಲಾಗಿದೆ. ಎಸ್ಪಿಗಳು, ಡಿವೈಎಸ್ಪಿಗಳು, ಇನ್ಸ್ ಪೆಕ್ಟರ್ ಗಳು, ಜ್ಯೂಡಿಷಲ್ ಆಫೀಸರ್ಸ್ ಹಾಗೂ ನಾನು ಮತ್ತು ಉಪಲೋಕಾಯುಕ್ತರು ತಪಾಸಣೆ ನಡೆಸಿದ್ದು, ಹಲವಾರು ಲೋಪದೋಷಗಳು ಕಂಡು ಬಂದಿವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT