ಮಹಾಲಕ್ಷ್ಮೀ-ಮುಕ್ತಿ ರಂಜನ್ 
ರಾಜ್ಯ

ಮಹಾಲಕ್ಷ್ಮೀ ಬರ್ಬರ ಹತ್ಯೆ ಪ್ರಕರಣ: ಒಡಿಶಾದಲ್ಲಿ ಕೊಲೆ ಆರೋಪಿ ನೇಣಿಗೆ ಶರಣು!

ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು.

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು. ಇದೀಗ ಆರೋಪಿ ಒಡಿಶಾದಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಮಹಾಲಕ್ಷ್ಮಿ ಜೊತೆ ಫ್ಯಾಶನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಟೀಮ್ ಹೆಡ್ ಮುಕ್ತಿ ರಂಜನ್ ರಾಯ್ ಆಕೆಯನ್ನು ಕೊಂದಿದ್ದಾನೆ ಎಂಬ ಸತ್ಯಾಂಶ ಬಯಲಾಗಿತ್ತು.

ನಿನ್ನೆ ಭದ್ರಕ್ ಗ್ರಾಮಕ್ಕೆ ಬಂದಿದ್ದ ಮುಕ್ತಿ ರಂಜನ್ ಕೆಲಕಾಲ ಮನೆಯಲ್ಲಿದ್ದ ಬಳಿಕ ರಾತ್ರಿ ಮನೆಯಿಂದ ಹೊರ ಹೋಗಿದ್ದನು. ಇಂದು ಬೆಳಗ್ಗೆ ಕುಳೇಪದ ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆರ್‌ಡಿ ಫಂಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ವಶಪಡಿಸಿಕೊಂಡು ಶವಪರೀಕ್ಷೆಗಾಗಿ ಭದ್ರಕ್ ಜನರಲ್ ಆಸ್ಪತ್ರೆಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT