ಮೃತ ಮಹಿಳೆ. 
ರಾಜ್ಯ

ಬೆಂಗಳೂರಿನಲ್ಲಿ ಮಹಿಳೆ ಹತ್ಯೆ: ಒಡಿಶಾದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ತಂಡ ರವಾನೆ- ಪರಮೇಶ್ವರ

ಹತ್ಯೆಯ ನಂತರ ಆರೋಪಿ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಭೇದಿಸಲು ರಚಿಸಲಾದ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ.

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ 50 ತುಂಡುಗಳಾಗಿ ಕತ್ತರಿಸಿ ಫ್ರೀಡ್ಜ್ ನಲ್ಲಿಟ್ಟ ಆರೋಪಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ಹತ್ಯೆಯ ನಂತರ ಆರೋಪಿ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಭೇದಿಸಲು ರಚಿಸಲಾದ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ಈ ಹತ್ಯೆಯು ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದರಿಂದ ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

"ಈಗಾಗಲೇ ಪೊಲೀಸರು ಆರೋಪಿ ಒಡಿಶಾದಲ್ಲಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ ಮತ್ತು ಮೂರ್ನಾಲ್ಕು ಪೊಲೀಸ್ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ಆರೋಪಿ ತಾನು ಇರುವ ಸ್ಥಳಗಳನ್ನು ಬದಲಾಯಿಸುತ್ತಿದ್ದಾನೆ" ಎಂದು ಪರಮೇಶ್ವರ ಹೇಳಿದ್ದಾರೆ.

"ಆರೋಪಿಯನ್ನು ಬಂಧಿಸಿದ ನಂತರ, ನಮಗೆ ಹೆಚ್ಚಿನ ಮಾಹಿತಿ ಸಿಗುತ್ತದೆ.... ಸದ್ಯ ಪ್ರಕರಣ ಸಂಬಂಧ ಎರಡು-ಮೂರು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಲಭ್ಯವಿರುವ ಸಾಕ್ಷ್ಯ ಮತ್ತು ಮಾಹಿತಿಯ ಆಧಾರದ ಮೇಲೆ ಒಡಿಶಾದಲ್ಲಿರುವ ಆರೋಪಿ ಈ ಕೃತ್ಯ ಎಸಗಿರುವ ಅನುಮಾನವಿದೆ. ಹೀಗಾಗಿ ಆತನನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಕಳೆದ ಶನಿವಾರ ವೈಯಾಲಿಕಾವಲ್‌ನಲ್ಲಿರುವ ಮನೆಯೊಂದರಲ್ಲಿ 29 ವರ್ಷದ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿತ್ತು. ಹತ್ಯೆಯಾದ ಮಹಿಳೆಯನ್ನು ಮಹಾಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಕೊಲೆಯ ಬಳಿಕ ಮೃತದೇಹವನ್ನು 50 ತುಂಡುಗಳನ್ನಾಗಿ ಕತ್ತರಿಸಿ ಒಂದೇ ಬಾಗಿಲಿನ 165-ಲೀಟರ್ ಫ್ರಿಡ್ಜ್ ನಲ್ಲಿಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT