ಹತ್ಯೆಯಾದ ಮಹಿಳೆ. 
ರಾಜ್ಯ

ವೈಯಾಲಿಕಾವಲ್ ಮಹಿಳೆ ಹತ್ಯೆ ಪ್ರಕರಣ: ಹಂತಕ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆ!

ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಡೈರಿ ಮೂಲಕ ಬಿಚ್ಚಿಟ್ಟಿದ್ದಾನೆ.

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಣಿಗೆ ಶರಣಾಗಿದ್ದ ಹಂತಕ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದ್ದು, ಈ ಡೆತ್ ನೋಟ್ ನಿಂದ ಹತ್ಯೆಯ ಕಾರಣ ಬಹಿರಂಗವಾಗಿದೆ.

ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಡೈರಿ ಮೂಲಕ ಬಿಚ್ಚಿಟ್ಟಿದ್ದಾನೆ.

ಮಹಿಳೆ ಕೊಲೆ ಪ್ರಕರಣದಲ್ಲಿ ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಮಹಾಲಕ್ಷ್ಮಿ ಕೆಲಸ ಮಾಡುತ್ತಿದ್ದ ಮಾಲ್ ನಲ್ಲಿ ಸ್ಟೋರ್ ಮ್ಯಾನೇಜರ್ ಆಗಿದ್ದ ಈತನೂ ಕೆಲಸ ಮಾಡುತ್ತಿದ್ದ. ಮಹಾಲಕ್ಷ್ಮೀ ನಾಪತ್ತೆಯಾಗಿದ್ದ ದಿನದಿಂದಲೂ ಈತ ಕೂಡ ನಾಪತ್ತೆಯಾಗಿದ್ದ. ಹೀಗಾಗಿ ಅನುಮಾನ ಮತ್ತಷ್ಟು ಹೆಚ್ಚಾಗಿತ್ತು.

ಆತನಿಗಾಗಿ ಹಲವು ಕಡೆ ಹುಡುಕಾಡಿದ್ದ ಪೊಲೀಸರಿಗೆ ಆತ ಒಡಿಶಾಗೆ ತೆರಳಿರೊ ಮಾಹಿತಿ ಸಿಕ್ಕಿತ್ತು. ಸಿಕ್ಕ ಮಾಹಿತಿ ಆಧರಿಸಿ ಒಡಿಶಾದೆ ತೆರಳಿದ್ದ ಪೊಲೀಸರಿಗೆ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಆರೋಪಿಯ ಸ್ಮಶಾನದ ಬಳಿಯಿರುವ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ನಡುವೆ ಆರೋಪಿ ಬಳಿ ಡೈರಿಯೊಂದು ಪತ್ತೆಯಾಗಿದ್ದು, ಡೈರಿ ಮೂಲಕ ಹತ್ಯೆಯ ಹಿಂದಿನ ಸತ್ಯ ಬಹಿರಂಗಗೊಂಡಿದೆ.

ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ ಕುರಿತು ರಂಜನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ.

ಸೆಪ್ಟಂಬರ್‌ 3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ಅಲ್ಲದೆ, ಹತ್ಯೆ ಬಳಿಕ ಹೆಬ್ಬಗೋಡಿಯಲ್ಲಿ ನೆಲೆಸಿರುವ ತನ್ನ ಸಹೋದರನಿಗೆ ಕರೆ ಮಾಡಿರುವುದಾಗಿಯೂ ಹೇಳಿಕೊಂಡಿದ್ದಾನೆ. ಆರೋಪಿ ರಂಜನ್ ಅವಿವಾಹಿತನಾಗಿದ್ದು, ಮಹಾಲಕ್ಷ್ಮೀಯನ್ನು ಮದುವೆಯಾಗುವ ಉದ್ದೇಶವನ್ನು ಹೊಂದಿರಲಿಲ್ಲ. ಆದರೆ, ಮಹಾಲಕ್ಷ್ಮೀ ಮದುವೆಯಾಗುವಂತೆ ನಿರಂತರವಾಗಿ ಪೀಡಿಸುತ್ತಿದ್ದು ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಅಲ್ಲದೆ, ಮಹಾಲಕ್ಷ್ಮೀ ರಂಜನ್ ಮೇಲೆ ಕೈ ಮಾಡಿದ್ದು, ಇದರಿಂದ ಕೋಪಗೊಂಡು ಆಕೆಯನ್ನು ಹತ್ಯೆ ಮಾಡಿರುವುದಾಗಿ ಹಾಗೂ ಹತ್ಯೆ ಬಳಿಕ ಮೃತದೇಹವನ್ನು 59 ತುಂಡು ಮಾಡಿ ಫ್ರಿಡ್ಜ್ ನಲ್ಲಿ ಇರಿಸಿರುವುದಾಗಿ ಬಹಿರಂಗಪಡಿಸಿದ್ದಾನೆ.

ಈ ನಡುವೆ ಮಹಾಲಕ್ಷ್ಮೀ ಅವರು ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ಚೂರಿ ಇರಿತದಿಂದ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಆದರೆ, ದೇಹದ ಭಾಗಗಳನ್ನು ರೆಫ್ರಿಜರೇಟರ್‌ನೊಳಗೆ ಇಟ್ಟಿರುವ ಹಿನ್ನೆಲೆಯಲ್ಲಿ ಕೊಳೆಯದ ಕಾರಣ ಆಕೆಯನ್ನು ಯಾವಾಗ ಹತ್ಯೆ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.

ಅಲ್ಲದೆ, ಹತ್ಯೆಯಲ್ಲಿ ಒಬ್ಬ ಅಥವಾ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಭಾಗಿಯಾಗಿರುವುದನ್ನು ಹೇಳುವುದೂ ಕಷ್ಟ ಸಾಧ್ಯ ಎಂದು ಮೂಲಗಳು ತಿಳಿಸಿವೆ.

ಇನ್ನು ಪ್ರಕರಣದ ತನಿಖೆಯನ್ನು ಮಂದುವರೆಸಿರುವ ಪೊಲೀಸರು ಹತ್ಯೆಗೆ ಬಳಸಲಾದ ಶಸ್ತ್ರಾಸ್ತ್ರಕ್ಕಾಗಿ ಹುಡುಕಾಟ ಮುಂದುವರೆಸಿದ್ದು, ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ಹಿನ್ನೆಡೆಯುಂಟಾಗಿದೆ ಎನ್ನಲಾಗಿದೆ.

ಈ ನಡುವೆ ಅಪರಾಧ ಸ್ಥಳದಿಂದ ವಶಪಡಿಸಿಕೊಂಡ ಸಾಕ್ಷಿಗಳನ್ನು ಹಿಡಿದು ವಿಧಿವಿಜ್ಞಾನ ಪ್ರಯೋಗಾಲದ ಅಧಿಕಾರಿಗಳು ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷಾ ವರದಿಗಳ ಬಳಿಕ ಹಂತಕ ಕುರಿತು ಮಾಹಿತಿಗಳು ಖಚಿತವಾಗಲಿವೆ ಎಂದು ಮೂಲಗಳು ತಿಳಿಸುವೆ. ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT