ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ವಿವಿಧ ಸಂಘಟನೆಗಳ ಸದಸ್ಯರು ಬುಧವಾರ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ ನಡೆಸಿದರು, 
ರಾಜ್ಯ

Muda ಹಗರಣ: ಸಿದ್ದರಾಮಯ್ಯ ಪುತ್ರ, ಪತ್ನಿ ವಿರುದ್ಧ FIR ದಾಖಲಿಸಿ: ಲೋಕಾಯುಕ್ತಕ್ಕೆ ಪ್ರದೀಪ್ ಕುಮಾರ್ ದೂರು

ಜೆಡಿಎಸ್ ಮುಖಂಡರ ಜೊತೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿದ ಪ್ರದೀಪ್ ಕುಮಾರ್ ಅವರು, ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಮೇಲೆ ಎಫ್‌ಐಆರ್ ಹಾಕಬೇಕು ಎಂದು ದೂರು ನೀಡಿದರು.

ಮೈಸೂರು: ಮುಡಾ ಹಗರಣ ಪ್ರಕಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಅಸ್ತು ಎಂದ ಬೆನ್ನಲ್ಲೇ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಡಾ. ಯತೀಂದ್ರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ದೂರುದಾರರಲ್ಲಿ ಒಬ್ಬರಾದ ಪ್ರದೀಪ್ ಕುಮಾರ್ ಅವರು ಬುಧವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಜೆಡಿಎಸ್ ಮುಖಂಡರ ಜೊತೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿದ ಪ್ರದೀಪ್ ಕುಮಾರ್ ಅವರು, ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಮೇಲೆ ಎಫ್‌ಐಆರ್ ಹಾಕಬೇಕು ಎಂದು ದೂರು ನೀಡಿದರು.

ಇದೇ ವೇಳೆ ಈ ಹಿಂದಿನ ದೂರುಗಳ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂಬ ಬಗ್ಗೆ ಹಿಂಬರಹ ನೀಡುವಂತೆ ಪ್ರದೀಪ್ ಕುಮಾರ್ ಒತ್ತಾಯಿಸಿದರು. ಆದರೆ, ಈಗ ಕೊಡಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳ ಸಲಹೆ ಪಡೆದು ಹಿಂಬರಹ ಕೊಡುತ್ತೇನೆ ಎಂದು ಲೋಕಾಯುಕ್ತ ಎಸ್‌ಪಿ ತಿಳಿಸಿದ್ದು, ಇದಕ್ಕೆ ಪ್ರದೀಪ್ ಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ತಜ್ಞರ ಸಲಹೆ ಪಡೆದು ಹಿಂಬರಹ ನೀಡುತ್ತೇವೆ‌‌. ಇದುವರೆಗಿನ ತನಿಖಾ ವರದಿಯ ಕುರಿತು ಮಾಹಿತಿ ನೀಡುತ್ತೇವೆ ಎಂದು ಹೇಳಿದ್ದಾರೆ. ನಾನು ಇನ್ನು 3 ದಿನ ಬಿಟ್ಟು ಮತ್ತೆ ಮೈಸೂರಿಗೆ ಬರುತ್ತೇನೆ. ಮೂರು ದಿನದಲ್ಲಿ ಉತ್ತರ ಬಾರದೆ ಇದ್ದರೆ ಮೈಸೂರು ಲೋಕಾಯುಕ್ತ ಎಸ್ ಪಿ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ. ನಮ್ಮ ದೂರಿಗೆ ಹಿಂಬರಹ ನೀಡಲು ಇಷ್ಟೊಂದು ಸಮಯ ಕೇಳುತ್ತಿದ್ದಾರೆ. ಇನ್ನು ತನಿಖೆ ಯಾವ ರೀತಿ ಮಾಡುತ್ತಾರೆ ಎಂಬ ಪ್ರಶ್ನೆ ನಮಗೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

17ಎ ಅಡಿಯಲ್ಲಿ ತನಿಖಾಧಿಕಾರಿ ಸ್ವತಂತ್ರವಾಗಿ ತನಿಖೆ ಮಾಡಬಹುದು ಎಂದು ಹೇಳಲಾಗಿದೆ. ಈ ಅಂಶದ ಆಧಾರದ ಮೇಲೆ ನನ್ನ ದೂರಿನ ಅನ್ವಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಬಹುದು. ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಇತರ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲು ಮಾಡಬೇಕು. ಲೋಕಾಯುಕ್ತ ಅಧಿಕಾರಿಗಳ ನಡೆಯನ್ನ ಗಮನಿಸಿದರೆ ಸಿಎಂ ಅವರ ಒತ್ತಡಕ್ಕೆ ಒಳಗಾದಂತೆ ಕಾಣುತ್ತಿದೆ. ನಾನು ಈ ಬಗ್ಗೆ ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸುವ ಚಿಂತನೆಯಲ್ಲಿದ್ದೇನೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT