ಸಂಗ್ರಹ ಚಿತ್ರ PTI
ರಾಜ್ಯ

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ.

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣದಿಂದ ಕೇಂದ್ರದ ಸುಪರ್ದಿಗೆ ಹೋಗುತ್ತದೆ. ಈ ಬಗ್ಗೆ ಸಚಿವ ಸಂಪುಟವು ವಿಸ್ತೃತ ಚರ್ಚೆ ನಡೆಸಿದ್ದು ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದರು.

ಇತ್ತೀಚೆಗೆ ಅರಣ್ಯ ಇಲಾಖೆ ಆಯೋಜಿಸಿದ್ದ ಸಮಾಲೋಚನೆಯಲ್ಲಿ, ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದ (ಇಎಸ್‌ಎ) ಹೊರಡಿಸಲಾಗಿದ್ದ ಆರನೇ ಕರಡು ಅಧಿಸೂಚನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಾದ್ಯಂತ ಪಶ್ಚಿಮ ಘಟ್ಟಗಳ 56,825.7 ಚದರ ಕಿಲೋಮೀಟರ್‌ಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಕೇಂದ್ರ ಪರಿಸರ ಸಚಿವಾಲಯವು 2014ರ ಮಾರ್ಚ್ ನಿಂದ ಆರು ಕರಡು ಅಧಿಸೂಚನೆಗಳನ್ನು ಹೊರಡಿಸಿದೆ. ಆದರೆ, ರಾಜ್ಯಗಳ ಆಕ್ಷೇಪದಿಂದಾಗಿ ಅಂತಿಮ ಅಧಿಸೂಚನೆ ಇನ್ನೂ ಬಾಕಿ ಉಳಿದಿದೆ.

ಒಟ್ಟಾರೆಯಾಗಿ, ಅಧಿಸೂಚನೆಯು ಗುಜರಾತ್‌ನಲ್ಲಿ 449 ಚದರ ಕಿಲೋಮೀಟರ್, ಮಹಾರಾಷ್ಟ್ರದಲ್ಲಿ 17,340 ಚದರ ಕಿಲೋಮೀಟರ್, ಗೋವಾದಲ್ಲಿ 1,461 ಚದರ ಕಿಲೋಮೀಟರ್, ಕರ್ನಾಟಕದಲ್ಲಿ 20,668 ಚದರ ಕಿಲೋಮೀಟರ್, ತಮಿಳುನಾಡಿನಲ್ಲಿ 6,914 ಚದರ ಕಿಲೋಮೀಟರ್ ಮತ್ತು ಕೇರಳದಲ್ಲಿ 9,993.7 ಚದರ ಕಿಲೋಮೀಟರ್‌ಗಳನ್ನುಇಎಸ್‌ಎ ಆಗಿ ಘೋಷಿಸಲು ಪ್ರಸ್ತಾಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT