ನಮ್ಮ ಮೆಟ್ರೋ  online desk
ರಾಜ್ಯ

ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ತಲೆ ತಿರುಗಿ ಬಿದ್ದ ಯುವತಿ: ಸಹ ಪ್ರಯಾಣಿಕರಿಂದ ರಕ್ಷಣೆ

ಪ್ರತೀ ಬೋಗಿಯಲ್ಲಿಯೂ ಎಮರ್ಜೆನ್ಸಿ ಬಟನ್ ಇರುತ್ತದೆ. ಯಾವುದೇ ಸಮಸ್ಯೆಯಾದರೂ ಜನರು ಆ ಬಟನ್ ಒತ್ತಿದರೆ, ಅದು ಲೋಕೋ ಪೈಲಟ್'ಗೆ ಸಂದೇಶ ನೀಡುತ್ತದೆ.

ಬೆಂಗಳೂರು: ಜನರಿಂದ ತುಂಬಿ ತುಳುಕುತ್ತಿದ್ದ ನಮ್ಮ ಮೆಟ್ರೋ ರೈಲಿನಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿ ಯುವತಿಯೊಬ್ಬಳು ತಲೆತಿರುಗಿ ಬಿದ್ದಿರುವ ಘಟನೆಯೊಂದು ಬುಧವಾರ ವರದಿಯಾಗಿದೆ.

ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಕ್ಕೆ ತೆರಳುತ್ತಿದ್ದ ಮೆಟ್ರೋ ರೈಲಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿದ್ದು, ಈ ವೇಳೆ ಮಹಿಳೆ ತಲೆ ತಿರುಗಿ ಬಿದ್ದಿದ್ದಾರೆ. ಕೂಡಲೇ ಸಹ ಪ್ರಯಾಣಿಕರು ಅವರನ್ನು ರಕ್ಷಣೆ ಮಾಡಿ, ನೀರು ಕೊಟ್ಟಿದ್ದಾರೆ.

ಸಂಜೆ 6 ಗಂಟೆ ಸುಮಾರಿಗೆ ಕೆಆರ್ ಪುರ ಮೆಟ್ರೋ ನಿಲ್ದಾಣದಲ್ಲಿ ರೈಲು ಹತ್ತಿದ್ದೆ. ಈ ವೇಳೆ ರೈಲು ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ನಿಂತಿದ್ದ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಬೀಳುತ್ತಿದ್ದರು. ಬಳಿಕ ಸ್ಥಳದಲ್ಲಿದ್ದವರು ಅವರಿಗೆ ಆಸನವನ್ನು ಬಿಟ್ಟುಕೊಟ್ಟು, ನೀರು ಕೊಟ್ಟರು. ಅಷ್ಟರಲ್ಲಿ ರೈಲು ಸ್ವಾಮಿ ವಿವೇಕಾನಂದ ರಸ್ತೆಯ ಮೆಟ್ರೋ ನಿಲ್ದಾಣ ತಲುಪಿತು. ನಿಲ್ದಾಣದಲ್ಲಿದ್ದ ಸಿಬ್ಬಂದಿಗೆ ಸಹಾಯಕ್ಕಾಗಿ ಕೂಗಲಾಯಿತು. ಆದರೆ, ಆ ವ್ಯಕ್ತಿ ಪ್ರತಿಕ್ರಿಯಿಸಲಿಲ್ಲ.

ಬಳಿಕ ಮೆಟ್ರೋ ಬಾಗಿಲು ಮುಚ್ಚಿತು. ಮತ್ತೆ ರೈಲು ಸಂಚರಿಸಲು ಆರಂಭಿಸಿತು. ಬಳಿಕ ತನ್ನ ಜೊತೆಗೆ ಬಂದಿದ್ದ ವ್ಯಕ್ತಿಯೊಂದಿಗೆ ಯುವತಿ ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಇಳಿದು ಹೋದರು. ರೈಲಿನೊಳಗೆ ಯಾವ ರೀತಿ ಸಹಾಯ ಪಡೆಯಬೇಕೆಂಬುದು ಯಾರಿಗೂ ತಿಳಿದಿರಲಿಲ್ಲ ಎಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಹಾಗೂ MNCಯ ಸಿಸ್ಟಂ ವಿಶ್ಲೇಷಕ ಸುನಿಲ್ ಶರ್ಮಾ ಅವರು ಹೇಳಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಎಂಆರ್'ಸಿಎಲ್, ಪ್ರತೀ ಬೋಗಿಯಲ್ಲಿಯೂ ಎಮರ್ಜೆನ್ಸಿ ಬಟನ್ ಇರುತ್ತದೆ. ಯಾವುದೇ ಸಮಸ್ಯೆಯಾದರೂ ಜನರು ಆ ಬಟನ್ ಒತ್ತಿದರೆ, ಅದು ಲೋಕೋ ಪೈಲಟ್'ಗೆ ಸಂದೇಶ ನೀಡುತ್ತದೆ. ಸಿಸಿಟಿವಿ ಮೂಲಕ ಪರಿಸ್ಥಿತಿಯನ್ನು ಅರಿತು, ನೆರವಿಗೆ ಧಾವಿಸಲಾಗುತ್ತದೆ. ಲೋಕೋ ಪೈಲಟ್ ಪರಿಸ್ಥಿತಿ ಅವಲೋಕಿಸಿ ತುರ್ತು ಪರಿಸ್ಥಿತಿ ನಿಜವಾಗಿದ್ದರೆ ಕೂಡಲೇ ರೈಲು ನಿಲ್ಲಿಸಿ ಪರಿಹಾರ ಕ್ರಮ ಕೈಗೊಳ್ಳುತ್ತಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT