ನಮ್ಮ ಮೆಟ್ರೋ  online desk
ರಾಜ್ಯ

ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ತಲೆ ತಿರುಗಿ ಬಿದ್ದ ಯುವತಿ: ಸಹ ಪ್ರಯಾಣಿಕರಿಂದ ರಕ್ಷಣೆ

ಪ್ರತೀ ಬೋಗಿಯಲ್ಲಿಯೂ ಎಮರ್ಜೆನ್ಸಿ ಬಟನ್ ಇರುತ್ತದೆ. ಯಾವುದೇ ಸಮಸ್ಯೆಯಾದರೂ ಜನರು ಆ ಬಟನ್ ಒತ್ತಿದರೆ, ಅದು ಲೋಕೋ ಪೈಲಟ್'ಗೆ ಸಂದೇಶ ನೀಡುತ್ತದೆ.

ಬೆಂಗಳೂರು: ಜನರಿಂದ ತುಂಬಿ ತುಳುಕುತ್ತಿದ್ದ ನಮ್ಮ ಮೆಟ್ರೋ ರೈಲಿನಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿ ಯುವತಿಯೊಬ್ಬಳು ತಲೆತಿರುಗಿ ಬಿದ್ದಿರುವ ಘಟನೆಯೊಂದು ಬುಧವಾರ ವರದಿಯಾಗಿದೆ.

ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಕ್ಕೆ ತೆರಳುತ್ತಿದ್ದ ಮೆಟ್ರೋ ರೈಲಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿದ್ದು, ಈ ವೇಳೆ ಮಹಿಳೆ ತಲೆ ತಿರುಗಿ ಬಿದ್ದಿದ್ದಾರೆ. ಕೂಡಲೇ ಸಹ ಪ್ರಯಾಣಿಕರು ಅವರನ್ನು ರಕ್ಷಣೆ ಮಾಡಿ, ನೀರು ಕೊಟ್ಟಿದ್ದಾರೆ.

ಸಂಜೆ 6 ಗಂಟೆ ಸುಮಾರಿಗೆ ಕೆಆರ್ ಪುರ ಮೆಟ್ರೋ ನಿಲ್ದಾಣದಲ್ಲಿ ರೈಲು ಹತ್ತಿದ್ದೆ. ಈ ವೇಳೆ ರೈಲು ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ನಿಂತಿದ್ದ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಬೀಳುತ್ತಿದ್ದರು. ಬಳಿಕ ಸ್ಥಳದಲ್ಲಿದ್ದವರು ಅವರಿಗೆ ಆಸನವನ್ನು ಬಿಟ್ಟುಕೊಟ್ಟು, ನೀರು ಕೊಟ್ಟರು. ಅಷ್ಟರಲ್ಲಿ ರೈಲು ಸ್ವಾಮಿ ವಿವೇಕಾನಂದ ರಸ್ತೆಯ ಮೆಟ್ರೋ ನಿಲ್ದಾಣ ತಲುಪಿತು. ನಿಲ್ದಾಣದಲ್ಲಿದ್ದ ಸಿಬ್ಬಂದಿಗೆ ಸಹಾಯಕ್ಕಾಗಿ ಕೂಗಲಾಯಿತು. ಆದರೆ, ಆ ವ್ಯಕ್ತಿ ಪ್ರತಿಕ್ರಿಯಿಸಲಿಲ್ಲ.

ಬಳಿಕ ಮೆಟ್ರೋ ಬಾಗಿಲು ಮುಚ್ಚಿತು. ಮತ್ತೆ ರೈಲು ಸಂಚರಿಸಲು ಆರಂಭಿಸಿತು. ಬಳಿಕ ತನ್ನ ಜೊತೆಗೆ ಬಂದಿದ್ದ ವ್ಯಕ್ತಿಯೊಂದಿಗೆ ಯುವತಿ ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಇಳಿದು ಹೋದರು. ರೈಲಿನೊಳಗೆ ಯಾವ ರೀತಿ ಸಹಾಯ ಪಡೆಯಬೇಕೆಂಬುದು ಯಾರಿಗೂ ತಿಳಿದಿರಲಿಲ್ಲ ಎಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಹಾಗೂ MNCಯ ಸಿಸ್ಟಂ ವಿಶ್ಲೇಷಕ ಸುನಿಲ್ ಶರ್ಮಾ ಅವರು ಹೇಳಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಎಂಆರ್'ಸಿಎಲ್, ಪ್ರತೀ ಬೋಗಿಯಲ್ಲಿಯೂ ಎಮರ್ಜೆನ್ಸಿ ಬಟನ್ ಇರುತ್ತದೆ. ಯಾವುದೇ ಸಮಸ್ಯೆಯಾದರೂ ಜನರು ಆ ಬಟನ್ ಒತ್ತಿದರೆ, ಅದು ಲೋಕೋ ಪೈಲಟ್'ಗೆ ಸಂದೇಶ ನೀಡುತ್ತದೆ. ಸಿಸಿಟಿವಿ ಮೂಲಕ ಪರಿಸ್ಥಿತಿಯನ್ನು ಅರಿತು, ನೆರವಿಗೆ ಧಾವಿಸಲಾಗುತ್ತದೆ. ಲೋಕೋ ಪೈಲಟ್ ಪರಿಸ್ಥಿತಿ ಅವಲೋಕಿಸಿ ತುರ್ತು ಪರಿಸ್ಥಿತಿ ನಿಜವಾಗಿದ್ದರೆ ಕೂಡಲೇ ರೈಲು ನಿಲ್ಲಿಸಿ ಪರಿಹಾರ ಕ್ರಮ ಕೈಗೊಳ್ಳುತ್ತಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT