ಚಂದ್ರಶೇಖರ್-ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಹಂದಿಗಳ ಜೊತೆ ಜಗಳಕ್ಕೆ ಇಳಿಯಬಾರದು: HD ಕುಮಾರಸ್ವಾಮಿಗೆ ADGP ಚಂದ್ರಶೇಖರ್ ಟಾಂಗ್

ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸೋಣಾ. ಅದನ್ನು ಯಾರಿಂದಲೂ ತಡಿಯಲು ಸಾಧ್ಯವಿಲ್ಲ.

ಬೆಂಗಳೂರು: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಭ್ರಷ್ಟಚಾರದ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ. ತನಿಖೆ ಮಾಡಬೇಕು ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು.

ಇದಕ್ಕೆ ಪತ್ರದ ಮೂಲಕ ತಮ್ಮ ಸಿಬ್ಬಂದಿಗಳಿಗೆ ಅಭಯ ನೀಡಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟ ಆರೋಪಗಳನ್ನು ಮಾಡಿದ್ದಾರೆ. ಆತ ಪ್ರಕರಣವೊಂದರ ಆರೋಪಿ ಅಷ್ಟೆ ಎಂದು ಖಾರವಾಗಿ ಬರೆದಿದ್ದಾರೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸೋಣಾ. ಅದನ್ನು ಯಾರಿಂದಲೂ ತಡಿಯಲು ಸಾಧ್ಯವಿಲ್ಲ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನು ರಕ್ಷಿಸುತ್ತೇನೆ ಎಂದು ಎಸ್ ಐಟಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಯ ನೀಡಿದ್ದಾರೆ.

ಜಾರ್ಜ್ ಬರ್ನಾಡ್ ಶಾ ಅವರ ಪ್ರಸಿದ್ಧ ಇಂಗ್ಲಿಷ್ ಸಾಲನ್ನು ಬಳಸಿರುವ ಚಂದ್ರಶೇಖರ್, ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಹೀಗಾಗಿ ನಾವು ಹಂದಿಗಳ ಜೊತೆ ಜಗಳ ಮಾಡಬಾರದು ಎಂದು ಹೇಳಿರುವ ಚಂದ್ರಶೇಖರ್ ಕೊನೆಯಲ್ಲಿ ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT