ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಗಲಭೆ 
ರಾಜ್ಯ

ನಾಗಮಂಗಲ ಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು

ಆರೋಪಿಗಳು ಇನ್ನೂ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದು, 1 ಲಕ್ಷ ರು. ಮೌಲ್ಯದ ಬಾಂಡ್ ಹಾಗೂ 'ಡಬಲ್ ಶ್ಯೂರಿಟಿ' ನೀಡಿದ ನಂತರ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ನಾಳೆ, ನಾಡಿದ್ದು ರಜೆ ಹಿನ್ನೆಲೆ ಸೋಮವಾರ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 11ರಂದು ಆರೋಪಿಗಳನ್ನು ಬಂಧಿಸಲಾಗಿತ್ತು.

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಇಡೀ ಪ್ರಕರಣದ ಕೇಂದ್ರಬಿಂದು ಬದ್ರಿಕೊಪ್ಪಲು ಗ್ರಾಮ ಅಕ್ಷರಸಹಃ ಸ್ಮಶಾನ ಮೌನವಾಗಿತ್ತು. ಬಂಧನ ಭೀತಿಯಲ್ಲಿ ಹಲವು ಯುವಕರು ಗ್ರಾಮವನ್ನ ತೊರೆದಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಆರೋಪಿಗಳು ಇನ್ನೂ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದು, 1 ಲಕ್ಷ ರು. ಮೌಲ್ಯದ ಬಾಂಡ್ ಹಾಗೂ 'ಡಬಲ್ ಶ್ಯೂರಿಟಿ' ನೀಡಿದ ನಂತರ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ಭೀತಿ ಅಲ್ಲಿ ಇದ್ದ ಕಿರಣ್ ಎಂಬಾತ ಬ್ರೈನ್ ಸ್ಟೋಕ್ ನಿಂದಾಗಿ ಇತ್ತೀಚೆಗೆ ಸಾವನ್ನಪ್ಪಿದ್ದ.

ಕಳೆದ ಸೆಪ್ಟೆಂಬರ್ 11ರಂದು ನಾಗಮಂಗಲ ಅಕ್ಷರಶಃ ಹೊತ್ತಿ ಉರಿದಿತ್ತು. ಈ ಗಲಭೆ ಪ್ರಕರಣದ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು. ನಾಗಮಂಗಲವನ್ನು ಸಂಪೂರ್ಣ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಆರೋಪಿಗಳನ್ನು ಬಂಧಿಸಿದ ಬಳಿಕ ನಾಗಮಂಗಲದ ಗಲಭೆ ರಾಜಕೀಯ ತಿರುವುಗಳನ್ನು ಪಡೆದುಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ