ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಗಲಭೆ 
ರಾಜ್ಯ

ನಾಗಮಂಗಲ ಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು

ಆರೋಪಿಗಳು ಇನ್ನೂ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದು, 1 ಲಕ್ಷ ರು. ಮೌಲ್ಯದ ಬಾಂಡ್ ಹಾಗೂ 'ಡಬಲ್ ಶ್ಯೂರಿಟಿ' ನೀಡಿದ ನಂತರ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ನಾಳೆ, ನಾಡಿದ್ದು ರಜೆ ಹಿನ್ನೆಲೆ ಸೋಮವಾರ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 11ರಂದು ಆರೋಪಿಗಳನ್ನು ಬಂಧಿಸಲಾಗಿತ್ತು.

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಇಡೀ ಪ್ರಕರಣದ ಕೇಂದ್ರಬಿಂದು ಬದ್ರಿಕೊಪ್ಪಲು ಗ್ರಾಮ ಅಕ್ಷರಸಹಃ ಸ್ಮಶಾನ ಮೌನವಾಗಿತ್ತು. ಬಂಧನ ಭೀತಿಯಲ್ಲಿ ಹಲವು ಯುವಕರು ಗ್ರಾಮವನ್ನ ತೊರೆದಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಆರೋಪಿಗಳು ಇನ್ನೂ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದು, 1 ಲಕ್ಷ ರು. ಮೌಲ್ಯದ ಬಾಂಡ್ ಹಾಗೂ 'ಡಬಲ್ ಶ್ಯೂರಿಟಿ' ನೀಡಿದ ನಂತರ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ಭೀತಿ ಅಲ್ಲಿ ಇದ್ದ ಕಿರಣ್ ಎಂಬಾತ ಬ್ರೈನ್ ಸ್ಟೋಕ್ ನಿಂದಾಗಿ ಇತ್ತೀಚೆಗೆ ಸಾವನ್ನಪ್ಪಿದ್ದ.

ಕಳೆದ ಸೆಪ್ಟೆಂಬರ್ 11ರಂದು ನಾಗಮಂಗಲ ಅಕ್ಷರಶಃ ಹೊತ್ತಿ ಉರಿದಿತ್ತು. ಈ ಗಲಭೆ ಪ್ರಕರಣದ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು. ನಾಗಮಂಗಲವನ್ನು ಸಂಪೂರ್ಣ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಆರೋಪಿಗಳನ್ನು ಬಂಧಿಸಿದ ಬಳಿಕ ನಾಗಮಂಗಲದ ಗಲಭೆ ರಾಜಕೀಯ ತಿರುವುಗಳನ್ನು ಪಡೆದುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT