ಸಂಗ್ರಹ ಚಿತ್ರ 
ರಾಜ್ಯ

ಮೈಸೂರು ದಸರಾ 2024: ಅ.3-11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​, ಅ.12ಕ್ಕೆ ಜಂಬೂ ಸವಾರಿ

ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದು, ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಮಂಡಳಿಯು ಶನಿವಾರ ಬಿಡುಗಡೆ ಮಾಡಿದೆ.

ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದು, ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ.

ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಕ್ಕೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ಪಂಜಿನ ಕವಾಯತ್​ ಅನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

ಈ ಬಾರಿ ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿದ್ದು, ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡುತ್ತವೆ. ಖಾಸಗಿ ವಾಹನದಲ್ಲಿ ಹೋಗುವವರಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ. ಇನ್ನು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ದಸರಾ 2024ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಭೇಟಿ ನೀಡಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!