ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 
ರಾಜ್ಯ

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ಗೆ ಬಿಡಿಎ ಸಿದ್ಧತೆ; ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ

ನಗರದಲ್ಲಿ ಜನದಟ್ಟಣೆ ಕಡಿಮೆ ಮಾಡಲು 19 ವರ್ಷಗಳ ಹಿಂದೆಯೇ ಈ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಬೆಂಗಳೂರು: 27,000 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್(ಹಿಂದೆ ಪೆರಿಫೆರಲ್ ರಿಂಗ್ ರೋಡ್ ಎಂದು ಕರೆಯಲಾಗುತ್ತಿತ್ತು) ಯೋಜನೆಗೆ ಸಾಲ ಪಡೆಯಲು ಸಚಿವ ಸಂಪುಟದ ಒಪ್ಪಿಗೆ ನೀಡಿದ ಬೆನ್ನಲ್ಲೇ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ತ್ವರಿತವಾಗಿ ಕಾಮಗಾರಿ ಆರಂಭಿಸಲು ಸಿದ್ಧತೆ ನಡೆಸಿದೆ.

ಈ ಯೋಜನೆಗೆ ಇತರ ಇಲಾಖೆಗಳಿಂದ ಸಿಬ್ಬಂದಿ ನಿಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದ್ದು, ಈಗ ಪರಿಹಾರಕ್ಕಾಗಿ ಮಾಲೀಕರು ಸಲ್ಲಿಸಿರುವ ಜಮೀನಿನ ದಾಖಲೆಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ಪ್ರಾಧಿಕಾರ ನಿರತವಾಗಿದೆ.

ಕಾರಿಡಾರ್‌ಗೆ ಸಂಬಂಧಿಸಿದ ಅನೇಕ ಅಂಶಗಳನ್ನು ವಿವರಿಸುವ ಸರ್ಕಾರಿ ಆದೇಶವನ್ನು ಪ್ರಕಟಿಸಲಾಗಿದೆ. ನಗರದಲ್ಲಿ ಜನದಟ್ಟಣೆ ಕಡಿಮೆ ಮಾಡಲು 19 ವರ್ಷಗಳ ಹಿಂದೆಯೇ ಈ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 2,560 ಎಕರೆ ಪ್ರದೇಶದಲ್ಲಿ 73.03 ಕಿಮೀ ಉದ್ದದ ಈ ರಸ್ತೆ ತುಮಕೂರು ರಸ್ತೆಯಿಂದ ಪ್ರಾರಂಭವಾಗಿ ದೊಡ್ಡಬಳ್ಳಾಪುರ ರಸ್ತೆ, ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ ಮತ್ತು ವೈಟ್‌ಫೀಲ್ಡ್ ರಸ್ತೆ ಮೂಲಕ ಹೊಸೂರು ರಸ್ತೆಯಲ್ಲಿ ಕೊನೆಗೊಳ್ಳುತ್ತದೆ.

ಯೋಜನೆಗಾಗಿ ತಮ್ಮ ಭೂಮಿ ನೀಡುವವರಿಗೆ ಇದು ಒಂದು ಉತ್ತಮ ಕೊಡುಗೆಯಾಗಿದೆ, ಏಕೆಂದರೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವಸತಿ ಕಾಯಿದೆ 2013 ಮತ್ತು ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು, 2013 ರ ಪ್ರಕಾರ ಪರಿಹಾರವನ್ನು ಪಾವತಿಸಲಾಗುತ್ತಿದೆ. ಭೂಮಾಲೀಕರಿಗೆ ಭೂಮಿಯ ಮಾರುಕಟ್ಟೆ ಮೌಲ್ಯಕ್ಕಿಂತ ದುಪ್ಪಟ್ಟು ದರ ನೀಡಲಾಗುತ್ತಿದೆ.

ಭೂಸ್ವಾಧೀನ ಸಂದರ್ಭದಲ್ಲಿ ನಮಗೆ ಸಲ್ಲಿಸಿರುವ ದಾಖಲೆಗಳ ಪರಿಶೀಲನೆಯನ್ನು ಆರಂಭಿಸಿದ್ದು, ನಿಜವಾದ ಮಾಲೀಕರಿಗೆ ಪರಿಹಾರ ನೀಡಲಾಗುವುದು ಎಂದು ಬಿಡಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೀಘ್ರದಲ್ಲೇ ಸಾಲ ನೀಡುವ ಸಂಸ್ಥೆಯನ್ನು ಅಂತಿಮಗೊಳಿಸಲಾಗುವುದು. "ನಾವು ಹೌಸಿಂಗ್ ಮತ್ತು ಅರ್ಬನ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್(HUDCO) ಮತ್ತು REC ಲಿಮಿಟೆಡ್ ಎರಡರಿಂದಲೂ ಸಾಲಕ್ಕಾಗಿ ಸಂಪರ್ಕಿಸುತ್ತಿದ್ದೇವೆ. ಬಹುಶಃ, ನಾವು HUDCO ನಿಂದ ಹಣವನ್ನು ಪಡೆದುಕೊಳ್ಳುತ್ತೇವೆ. ಏಕೆಂದರೆ ಅದು ಶೇ. 100 ರಷ್ಟು ಸಾಲ ನೀಡಲು ಸಿದ್ಧವಾಗಿದೆ. ಆದಾಗ್ಯೂ, HUDCOಗೆ ಶೇ. 9 ಕ್ಕಿಂತ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವಂತೆ ನಾವು ಕೇಳಿದ್ದೇವೆ ಮತ್ತು ಅವರೊಂದಿಗೆ ಮಾತುಕತೆ ನಡೆಯುತ್ತಿದೆ. ಆದರೆ REC ಪೂರ್ಣ ಯೋಜನಾ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ಅವರು ಹೇಳಿದ್ದಾರೆ.

ಸಿಬ್ಬಂದಿ ಕೊರತೆ ಯೋಜನಾ ಕಾರ್ಯದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲು, ಸರ್ಕಾರವು ಬಿಬಿಎಂಪಿ, ಪಿಡಬ್ಲ್ಯೂಡಿ ಮತ್ತು ಇತರ ಸರ್ಕಾರಿ ಇಲಾಖೆಗಳಿಂದ ಸಿಬ್ಬಂದಿಯನ್ನು ನಿಯೋಜಿಸಲು ಆದೇಶಿಸಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ವಿಶೇಷ ಭೂಸ್ವಾಧೀನ ಅಧಿಕಾರಿಗಳು, ಎಂಟು ತಹಶೀಲ್ದಾರ್‌ಗಳು, ಎಂಟು ಉಪ ತಹಶೀಲ್ದಾರ್‌ಗಳು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, 10 ಸಹಾಯಕ ಎಂಜಿನಿಯರ್‌ಗಳು, ಒಬ್ಬರು ಕಂದಾಯ ನಿರೀಕ್ಷಕರು, ಎಂಟು ಪ್ರಥಮ ದರ್ಜೆ ಸಹಾಯಕರು, ಎಂಟು ಸರ್ವೆಯರ್‌ಗಳು, ಮೇಲ್ವಿಚಾರಕರು ಮತ್ತು 16 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಒಂದು ವರ್ಷದ ಅವಧಿಗೆ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ, ಡಾ ಶಿವರಾಮ ಕಾರಂತ್ ಲೇಔಟ್‌ನ ಒಂಬತ್ತು ಭೂಸ್ವಾಧೀನ ಅಧಿಕಾರಿಗಳಿಗೆ(ಇನ್ನೂ ಮಂಜೂರು ಮಾಡಲಾಗಿಲ್ಲ) ಬಿಬಿಸಿ ಯೋಜನೆಯ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT