ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್​ಸ್ಟಿಟ್ಯೂಟ್ ಮುಂಭಾಗದಲ್ಲಿ ನಡೆದಿದೆ.

ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಕಾರು ಟಚ್ ಆಗಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ, ಈ ವೇಳೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್​ನ ಹಿಂದಿನ ಚಕ್ರ ಆತನ ತಲೆ ಮೇಲೆ ಮೇಲೆ ಹರಿದಿದೆ. ಪರಿಣಾಮ ಫುಲ್ ಹೆಲ್ಮೆಟ್ ಧರಿಸಿದ್ದರೂ ಆತನ ಜೀವ ಉಳಿದಿಲ್ಲ.

ಮೃತ ವ್ಯಕ್ತಿಯನ್ನು ಈಶ್ವರ್(43) ಎಂದು ಗುರುತಿಸಲಾಗಿದ್ದು, ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ವ್ಯಕ್ತಿ ಈಶ್ವರ್​ ವಿದ್ಯಾರಣ್ಯಪುರ ನಿವಾಸಿಯಾಗಿದ್ದು, ಚಿನ್ನ, ಬೆಳ್ಳಿಯ ವ್ಯಾಪಾರ ಮಾಡುತ್ತಿದ್ದರು. ಇಬ್ಬರು ಗಂಡು ಮಕ್ಕಳು ಹೆಂಡತಿಯೊಂದಿಗೆ ವಾಸವಾಗಿದ್ದರು. ಒಬ್ಬ ಮಗನಿಗೆ 13 ವರ್ಷ ಮತ್ತೊಬ್ಬನಿಗೆ 10 ವರ್ಷ.

ಸದ್ಯ ಈಶ್ವರ್ ಮೃತದೇಹ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಶವಗಾರದಲ್ಲಿದೆ. ಪೋಸ್ಟ್ ಮಾರ್ಟಂ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.

ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT