ತುರ್ತು ಭೂಸ್ಪರ್ಶ ಮಾಡಿದ IAF ಹೆಲಿಕಾಪ್ಟರ್ 
ರಾಜ್ಯ

ತಾಂತ್ರಿಕ ದೋಷ: ಕೆಜಿಎಫ್‌ನಲ್ಲಿ IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಡಿಕೆ ಹಳ್ಳಿಯಲ್ಲಿ ಹೆಲಿಕಾಪ್ಟರ್ ಬಂದಿಳಿದ ಬಗ್ಗೆ ತಮ್ಮ ಹೊಲದಲ್ಲಿದ್ದ ಕೆಲಸ ಮಾಡುತ್ತಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಧಾವಿಸಿತು.

ಕೋಲಾರ: ಬೆಂಗಳೂರಿನ ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ (ಐಎಎಫ್) ಸೇರಿದ ಚೇತಕ್ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಕೆಜಿಎಫ್ ತಾಲೂಕಿನ ದೊಡ್ಡೂರು ಕರಪನಹಳ್ಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಮೂಲಗಳ ಪ್ರಕಾರ ವಿಮಾನದಲ್ಲಿ ಮೂವರು ಪೈಲಟ್‌ಗಳಿದ್ದರು. ಡಿಕೆ ಹಳ್ಳಿಯಲ್ಲಿ ಹೆಲಿಕಾಪ್ಟರ್ ಬಂದಿಳಿದ ಬಗ್ಗೆ ತಮ್ಮ ಹೊಲದಲ್ಲಿದ್ದ ಕೆಲಸ ಮಾಡುತ್ತಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಧಾವಿಸಿತು. ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಗಳಿಂದ ಕೂಡಿದ್ದರಿದ ಸಿಬ್ಬಂದಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ಸಹಿತ ವಿಮಾನದಲ್ಲಿದ್ದವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ಐಎಎಫ್‌ನ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಪ್ರೋಟೋಕಾಲ್‌ಗೆ ಬದ್ಧವಾಗಿ, ಎಲ್ಲಾ ಮೂವರು ಪೈಲಟ್‌ಗಳಿಗೆ ಬಿಇಎಂಎಲ್ ಅತಿಥಿಗೃಹದಲ್ಲಿ ವಸತಿ ಕಲ್ಪಿಸಲಾಗಿದ್ದು, ಹೆಲಿಕಾಪ್ಟರ್ ಸುತ್ತಲೂ ಭದ್ರತಾ ಪರಿಧಿಯನ್ನು ಸ್ಥಾಪಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಶಾಂತರಾಜು ತಿಳಿಸಿದ್ದಾರೆ. ಚೇತಕ್‌ನ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲು ತಂತ್ರಜ್ಞರ ತಂಡವು ಮತ್ತೊಂದು ಹೆಲಿಕಾಪ್ಟರ್‌ನಲ್ಲಿ ಸ್ಥಳಕ್ಕೆ ತಲುಪಿದೆ ಎಂದು ಅವರು ಹೇಳಿದರು. ಅವರ ನೆರವಿಗೆ ಘಟನಾ ಸ್ಥಳದಲ್ಲಿ ಬೆಳಕಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಇದೇ ವೇಳೆ ಮತ್ತೊಂದು ತಂಡ ರಸ್ತೆ ಮಾರ್ಗವಾಗಿ ಸ್ಥಳಕ್ಕೆ ತಲುಪುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT