ಸಾಂದರ್ಭಿಕ ಚಿತ್ರ 
ರಾಜ್ಯ

ಈಗ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿಯಲ್ಲಿ ಮಂಡಿ ಶಸ್ತ್ರಚಿಕಿತ್ಸೆ, ಹಿಪ್ ರಿಪ್ಲೇಸ್‌ಮೆಂಟ್ ಲಭ್ಯ

ಪ್ರಸ್ತುತ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ಶೇ. 35 ರಷ್ಟು ರೋಗಿಗಳಿಗೆ ಮಾತ್ರ TKR ಮತ್ತು THR ಶಸ್ತ್ರಚಿಕಿತ್ಸೆಗಳನ್ನು ನೀಡಲಾಗುತ್ತಿದೆ.

ಬೆಂಗಳೂರು: ಮಂಡಿ ಶಸ್ತ್ರ ಚಿಕಿತ್ಸೆ(ಟೋಟಲ್ ನೀ ರಿಪ್ಲೇಸ್‌ಮೆಂಟ್) ಮತ್ತು ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್(ಟಿಎಚ್‌ಆರ್) ಶಸ್ತ್ರಚಿಕಿತ್ಸೆ ಅಗತ್ಯವಿರುವ ಜನರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಪರೇಷನ್ ಅಂತಾ ಹೋದ್ರೆ ಲಕ್ಷ ಲಕ್ಷ ವೆಚ್ಚವಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಎರಡು ಶಸ್ತ್ರಚಿಕಿತ್ಸೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಗೆ ಒಳಪಡಿಸಿ ಆದೇಶ ಹೊರಡಿಸಿದೆ.

'ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ(ABArK)ಯೋಜನೆ' ಅಡಿಯಲ್ಲಿ ಮಂಡಿ ಶಸ್ತ್ರ ಚಿಕಿತ್ಸೆ ಮತ್ತು ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದ್ದು, ಇದು ಖಾಸಗಿ ಆರೋಗ್ಯ ಸೌಲಭ್ಯಗಳ ಮೇಲಿನ ಪ್ರಸ್ತುತ ಅವಲಂಬನೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಪ್ರಸ್ತುತ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ಶೇ. 35 ರಷ್ಟು ರೋಗಿಗಳಿಗೆ ಮಾತ್ರ TKR ಮತ್ತು THR ಶಸ್ತ್ರಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಈ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಬೆಂಗಳೂರಿನಲ್ಲಿರುವ ಸಂಜಯ್ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಟ್ರಾಮಾ ಮತ್ತು ಆರ್ಥೋಪೆಡಿಕ್ಸ್ ಅನ್ನು TKR ಮತ್ತು THR ಶಸ್ತ್ರಚಿಕಿತ್ಸೆಗಳಿಗಾಗಿ 'ಉತ್ಕೃಷ್ಟತೆಯ ಕೇಂದ್ರ' (CoE) ಎಂದು ಗೊತ್ತುಪಡಿಸಿದೆ.

ರಾಜ್ಯ ಸರ್ಕಾರ ABArK ಯೋಜನೆಯಡಿಯಲ್ಲಿ ಮಂಡಿ ಶಸ್ತ್ರಚಿಕಿತ್ಸೆ ಮತ್ತು ಹಿಪ್ ರಿಪ್ಲೇಸ್‌ಮೆಂಟ್ ಪರಿಶೀಲಿಸಲು ಜವಾಬ್ದಾರಿಯುತ ಸಮಿತಿಯನ್ನು ಪುನರ್ರಚಿಸಿದೆ. ಈಗ ಮೂರರಿಂದ ನಾಲ್ಕು ಹೆಚ್ಚುವರಿ ಮಂಡಿ ಶಸ್ತ್ರಚಿಕಿತ್ಸಕರನ್ನು ಒಳಗೊಂಡಿರುವ ಈ ಸಮಿತಿಯು ಅಗತ್ಯ ಮತ್ತು ಸೂಕ್ತವಾದ ಶಸ್ತ್ರಚಿಕಿತ್ಸೆಗಳನ್ನು ಮಾತ್ರ ನಿರ್ವಹಿಸುತ್ತದೆ ಮತ್ತು ಖಾಸಗಿ ಆಸ್ಪತ್ರೆಗಳ ರೆಫರಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಈ ಸಮಿತಿಯ ಅನುಮೋದನೆಯಿಲ್ಲದೆ ಖಾಸಗಿ ಆಸ್ಪತ್ರೆಗಳಿಗೆ TKR ಅಥವಾ THR ರೆಫರಲ್‌ಗಳನ್ನು ಮಾಡುವಂತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT