ಸಾಂಕೇತಿಕ ಚಿತ್ರ online desk
ರಾಜ್ಯ

ಬೆಲೆ ಏರಿಕೆ ಸರಣಿಗೆ ಮತ್ತೊಂದು ಸೇರ್ಪಡೆ: ಮಕ್ಕಳು ವಿದ್ಯಾರ್ಥಿಗಳಿಗೆ ಭಾರಿ ನಿರಾಸೆ!

ಪರಿಷ್ಕೃತ ದರ ಏ.1 ರಿಂದಲೇ ಜಾರಿಗೆ ಬಂದಿದೆ. ವಯಸ್ಕರಿಗೆ ಮಾತ್ರವಲ್ಲದೇ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಗುಂಪು ಬುಕ್ಕಿಂಗ್ ಪ್ರವೇಶ ಶುಲ್ಕ ಕೂಡ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಬೆಲೆ ಏರಿಕೆ ರಾಕೆಟ್ ವೇಗದಲ್ಲಿ ಮೇಲೇರುತ್ತಿದ್ದು ಸೇವೆ, ದೈನಂದಿನ ವಸ್ತುಗಳ ಬೆಲೆ ಏರಿಕೆಗೆ ಹೈರಾಣಾಗಿರುವ ಜನರಿಗೆ ಮತ್ತೊಂದು ಕಹಿ ಸುದ್ದಿ ಬಂದಿದೆ.

ಬೆಲೆ ಏರಿಕೆ ಪಟ್ಟಿಗೆ ಹೊಸದಾಗಿ ಒಂದು ಸೇವೆ ಸೇರ್ಪಡೆಯಾಗಿದ್ದು, ಇದರಿಂದ ವಿದ್ಯಾರ್ಥಿಗಳು, ಮಕ್ಕಳಿಗೂ ಭಾರಿ ನಿರಾಸೆ ಮೂಡಿದೆ.

ನಗರದ ಜವಹಾರ್‌ಲಾಲ್ ನೆಹರು ತಾರಾಲಯದ ಸ್ಕೈ ಥಿಯೇಟರ್‌ ಪ್ರವೇಶ ಶುಲ್ಕ ಶೇ.25ರಷ್ಟು ಹೆಚ್ಚಳವಾಗಿದೆ. ವಯಸ್ಕರ ಪ್ರವೇಶಕ್ಕೆ ನಿಗದಿಯಾಗಿದ್ದ ₹75 ದರ ಈಗ ₹100 ಗಳಿಗೆ ಏರಿಕೆಯಾಗಿದೆ.

ಪರಿಷ್ಕೃತ ದರ ಏ.1 ರಿಂದಲೇ ಜಾರಿಗೆ ಬಂದಿದೆ. ವಯಸ್ಕರಿಗೆ ಮಾತ್ರವಲ್ಲದೇ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಗುಂಪು ಬುಕ್ಕಿಂಗ್ ಪ್ರವೇಶ ಶುಲ್ಕ ಕೂಡ ಏರಿಕೆಯಾಗಿದೆ.

ನಿರ್ವಹಣೆ ಶುಲ್ಕ ಹಾಗೂ ಸ್ಕೈ ಥಿಯೇಟರ್ ಶೋ ನಡೆಸುವ ವೆಚ್ಚ ಹೆಚ್ಚಳವಾಗಿರುವ ಪರಿಣಾಮ, ಅದನ್ನು ಸರಿದೂಗಿಸಲು ಶುಲ್ಕ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಶೋ ದರವನ್ನು 2020ರಲ್ಲಿ ಪರಿಷ್ಕರಿಸಲಾಗಿತ್ತು ಎಂದು ತಾರಾಲಯದ ನಿರ್ದೇಶಕ ಡಾ.ಬಿ.ಆರ್. ಗುರುಪ್ರಸಾದ್ ತಿಳಿಸಿದ್ದಾರೆ.

ಬಾಹ್ಯಾಕಾಶದ ಕುರಿತು ಮಕ್ಕಳಲ್ಲಿ ಆಸಕ್ತಿ ಮೂಡಿಸುವುದು, ಹೊಸ ಹೊಸ ವಿಜ್ಞಾನ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳನ್ನು ವಿಜ್ಞಾನದ ಕಡೆ ಸೆಳೆಯುವ ಉದ್ದೇಶದೊಂದಿಗೆ ತಾರಾಲಯದಲ್ಲಿ ಶೋ ಆಯೋಜನೆ ಮಾಡಲಾಗುತ್ತದೆ.

ಪರಿಷ್ಕೃತ ಸ್ಕೈ ಥಿಯೇಟರ್ ಪ್ರವೇಶ ದರ

  • 16 ವರ್ಷದೊಳಗಿನ ಮಕ್ಕಳು 60 ₹

  • ವಯಸ್ಕರು 100 ₹

  • ವಿದ್ಯಾರ್ಥಿಗಳು ಬ್ಲಾಕ್ ಬುಕ್ಕಿಂಗ್ (210 ಸೀಟ್ಸ್‌) 10,000₹

  • ಗುಂಪಾಗಿ ಬರುವ ಶಾಲಾ ವಿದ್ಯಾರ್ಥಿಗಳು 50 ₹

  • ಇತರರಿಗೆ ಬ್ಲಾಕ್ ಬುಕ್ಕಿಂಗ್ (210 ಸೀಟ್ಸ್‌) 20,000 ₹

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel