ವಿಕ್ಟೋರಿಯಾ ಆಸ್ಪತ್ರೆ  
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 4-6 ತಿಂಗಳಲ್ಲಿ ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪನೆ: 1 ಕೋಟಿ ರೂ ಅನುದಾನ ಮಂಜೂರು

ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.

ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಮತ್ತು ಮರುಪಡೆಯುವಿಕೆ ಕೇಂದ್ರವನ್ನು ಸ್ಥಾಪಿಸಲು ವೈದ್ಯಕೀಯ ಶಿಕ್ಷಣ ಇಲಾಖೆ 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಮಾಹಿತಿ ನೀಡಿದ್ದು, ಆರು ತಿಂಗಳ ಒಳಗೆ ಅಂಗಾಂಗ ಮರು ಪಡೆಯುವಿಕೆ ಕೇಂದ್ರವು ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ.

ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಕೇಂದ್ರ, ದೇಹದಾನಿಗಳು ಮೃತಪಟ್ಟಾಗ ಅಂಗಗಳನ್ನು ಸಂಗ್ರಹಿಸುವ ವಿಶೇಷ ಘಟಕವಾಗಿ ಕಾರ್ಯನಿರ್ವಹಿಸಲಿದೆ. ಐಸಿಯು, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಾಲಯ ಸೌಲಭ್ಯಗಳು ಮತ್ತು ವಿವಿಧ ಹಂತದ ತನಿಖಾ ಸಾಮರ್ಥ್ಯಗಳನ್ನು ಹೊಂದಿದ್ದು,‌ ಸಮಗ್ರ ಸೇವೆ ನೀಡಲಿದೆ ಎಂದು ತಿಳಿಸಿದರು.

ಅಪಘಾತ ಮತ್ತು ತುರ್ತು ಆರೈಕೆ ಕೇಂದ್ರವನ್ನು ಹೊಂದಿರುವ ವಿಕ್ಟೋರಿಯಾ ಆಸ್ಪತ್ರೆ, ಗ್ಯಾಸ್ಟ್ರೊ ಎಂಟರಾಲಜಿ ಮತ್ತು ಮೂತ್ರವಿಜ್ಞಾನ ಅಂಗಾಂಗ ಕಸಿ, ಪ್ರಾದೇಶಿಕ ನೇತ್ರವಿಜ್ಞಾನ, ಚರ್ಮ ಬ್ಯಾಂಕ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ. ಇಂತಹ ವಿಶೇಷ ಸೌಲಭ್ಯಗಳನ್ನು ಹೊಂದಿರುವ ದಕ್ಷಿಣ ಭಾರತದ ಅತಿದೊಡ್ಡ ಆಸ್ಪತ್ರೆಗಳಲ್ಲಿ ‘ವಿಕ್ಟೋರಿಯಾ’ವೂ ಒಂದಾಗಿದೆ. ಅಂಗಾಂಗ ಮರುಪಡೆಯುವಿಕೆಯಲ್ಲಿ, ಸಂಭಾವ್ಯ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳು ಅಗತ್ಯ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.

ಈ ಕೇಂದ್ರವು ಮೀಸಲಾದ ಸಿಬ್ಬಂದಿ, ಐಸಿಯು ಮತ್ತು ಹಾಸಿಗೆಗಳನ್ನು ಹೊಂದಿರುತ್ತದೆ. ಬೇಡಿಕೆ ಬಂದ ಕೂಡಲೇ ಕುಟುಂಬವು ಅನುಮೋದನೆ ನೀಡಿದ ನಂತರ ಐಸಿಯುಗಳಿಂದ ಮೀಸಲಾದ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ. ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಅವರು ಮಾತನಾಡಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಮಗ್ರ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸುವುದರಿಂದ ಅಂಗಾಂಗ ದಾನ ಪ್ರಕ್ರಿಯೆ ಹೆಚ್ಚಿಸಲು ನಮಗೆ ಅವಕಾಶ ಸಿಗುತ್ತದೆ. ಇದರಿಂದ ಬಡವರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್