ರಾಜ್ಯ

ಶೇ.40 ರಷ್ಟು ಕಮಿಷನ್: ತನಿಖಾ ಆಯೋಗದ ವರದಿಯಲ್ಲಿ ಇಬ್ಬರು ಮಾಜಿ BJP ಶಾಸಕರ ಹೆಸರು ಉಲ್ಲೇಖ!

ಚಿತ್ರದುರ್ಗದ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಕಾರವಾರದ ರೂಪಾಲಿ ನಾಯ್ಕ್ ಮತ್ತು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇಂಜಿನಿಯರ್ ಎಸ್ ಎಫ್ ಪಾಟೀಲ್ ವಿರುದ್ಧದ ಪ್ರತ್ಯೇಕ ಕಿಕ್ ಬ್ಯಾಕ್ ಆರೋಪಗಳು ಸತ್ಯ ಎಂಬುದು ಆಯೋಗಕ್ಕೆ ತಿಳಿದುಬಂದಿದೆ. ಇದು ಗುತ್ತಿಗೆದಾರರ ಸಾಕ್ಷ್ಯವನ್ನು ಆಧರಿಸಿದೆ.

ಬೆಂಗಳೂರು: ‘ಶೇ. 40 ಕಮಿಷನ್’ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ ದಾಸ್‌ ಆಯೋಗದ ವರದಿಯಲ್ಲಿ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಹಾಗೂ ಲೋಕೋಪಯೋಗಿ ಇಲಾಖೆಯ ಹಿರಿಯ ಎಂಜಿನಿಯರ್‌ ಹೆಸರನ್ನು ಉಲ್ಲೇಖಿಸಲಾಗಿದೆ.

ಚಿತ್ರದುರ್ಗದ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಕಾರವಾರದ ರೂಪಾಲಿ ನಾಯ್ಕ್ ಮತ್ತು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇಂಜಿನಿಯರ್ ಎಸ್ ಎಫ್ ಪಾಟೀಲ್ ವಿರುದ್ಧದ ಪ್ರತ್ಯೇಕ ಕಿಕ್ ಬ್ಯಾಕ್ ಆರೋಪಗಳು ಸತ್ಯ ಎಂಬುದು ಆಯೋಗಕ್ಕೆ ತಿಳಿದುಬಂದಿದೆ. ಇದು ಗುತ್ತಿಗೆದಾರರ ಸಾಕ್ಷ್ಯವನ್ನು ಆಧರಿಸಿದೆ.

ಈ ಸಂಬಂಧ ಜುಲೈ 5, 2024 ರಂದು, ಗುತ್ತಿಗೆದಾರ ಆರ್ ಮಂಜುನಾಥ್ ಅವರು ಆಯೋಗದ ಮುಂದೆ ಹೇಳಿಕೆ ನೀಡಿದ್ದರು. ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರು.

2019ರಿಂದ 2023ರ ಅವಧಿಯಲ್ಲಿ ತಿಪ್ಪಾರೆಡ್ಡಿ ಚಿತ್ರದುರ್ಗ ಶಾಸಕರಾಗಿದ್ದಾಗ ಕಟ್ಟಡ ಕಾಮಗಾರಿಗೆ ಶೇ.5-7, ರಸ್ತೆ ಕಾಮಗಾರಿಗೆ ಶೇ.15-20, ಸಣ್ಣ ನೀರಾವರಿಗೆ ಶೇ.20-25ರಷ್ಟು ಕಮಿಷನ್ ನೀಡಬೇಕು ಎಂಬ ನಿಯಮ ಜಾರಿಯಲ್ಲಿತ್ತು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಹಾಲಿ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.

ರೂ. 2.8 ಕೋಟಿ ಮೊತ್ತದ ಪಿಡಬ್ಲ್ಯುಡಿ ಕಟ್ಟಡ ಕಾಮಗಾರಿ ಗುತ್ತಿಗೆ ಪಡೆದು, ವರ್ಕ್ ಆರ್ಡರ್ ಬಂದ ನಂತರ ಶೇ.5-7ರಷ್ಟು ಕಮಿಷನ್ ನೀಡಲು ನಿರಾಕರಿಸಿದ್ದೆ. ಕಾಮಗಾರಿ ಆರಂಭಿಸಲು ಶಾಸಕರು ಸಹಕರಿಸಲಿಲ್ಲ. ಯಾವುದೇ ಆಯ್ಕೆಯಿಲ್ಲದೆ ಅಧಿಕಾರಿಗಳ ಒತ್ತಡಕ್ಕೆ ಮಣಿದು ರೂ. 10 ಲಕ್ಷಗಳನ್ನು ತಿಪ್ಪಾರೆಡ್ಡಿ ಅವರ ಮನೆಗೆ ತಲುಪಿಸಿದ ನಂತರ ಕೆಲಸ ಆರಂಭಕ್ಕೆ ಅವಕಾಶ ನೀಡಲಾಯಿತು.

ಇದೇ ರೀತಿ ರೂ. 11.5 ಕೋಟಿ ಮೊತ್ತದ ಆರೋಗ್ಯ ಇಲಾಖೆ ಟೆಂಡರ್ ಗಾಗಿ ರೂ. 25 ಲಕ್ಷ ಕಮಿಷನ್ ನ್ನು ತಿಪ್ಪಾರೆಡ್ಡಿಗೆ ನೀಡಿರುವುದಾಗಿ ಮಂಜುನಾಥ್ ಹೇಳಿದ್ದಾರೆ. ಮಂಜುನಾಥ್ ನೀಡಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಆಯೋಗ, ಕಮಿಷನ್‌ಗೆ ಬೇಡಿಕೆಯಿಟ್ಟಿದ್ದರಿಂದ ಪಾವತಿಸಲಾಗಿದೆ ಎಂದು ಪ್ರಾಥಮಿಕವಾಗಿ ತೀರ್ಮಾನಿಸಿದೆ.

ಇನ್ನೋರ್ವ ಗುತ್ತಿಗೆದಾರ ಮಲ್ಲನಗೌಡ ಸಂಕಗೌಡ ಶನಿ ಅವರು ಅಂದಿನ ಪಿಡಬ್ಲ್ಯುಡಿ ಮುಖ್ಯ ಎಂಜಿನಿಯರ್ ಎಸ್‌ಎಫ್‌ ಪಾಟೀಲ್‌ಗೆ ಕಿಕ್‌ಬ್ಯಾಕ್ ಪಾವತಿಸಲು ನಿರಾಕರಿಸಿದ ನಂತರ ಬಿಲ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಆಯೋಗದ ಮುಂದೆ ಹೇಳಿಕೆ ನೀಡಿದ್ದಾರೆ. ಪಿಡಬ್ಲ್ಯುಡಿ ಧಾರವಾಡ ವಿಭಾಗದಡಿ ನವಲಗುಂದ, ಕುಂದಗೋಳ ಮತ್ತು ಹುಬ್ಬಳ್ಳಿ ತಾಲ್ಲೂಕುಗಳಲ್ಲಿ ಕಾಮಗಾರಿಗಳನ್ನು ನಡೆಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನವೆಂಬರ್ 12, 2024 ರಂದು ನಡೆದ ಗುತ್ತಿಗೆದಾರ ಮಾಧವ ಬಾಬು ನಾಯ್ಕ್ ಅವರ ವಿಚಾರಣೆ ವೇಳೆ 2021 ರಲ್ಲಿ ಆಗಿನ ಕಾರವಾರ ಶಾಸಕಿ ರೂಪಾಲಿ ನಾಯ್ಕ್ ಮತ್ತು ಅವರ ಸಂಗಡಿಗರು ಕಮಿಷನ್ ನೀಡುವಂತೆ ಕೇಳಿದ್ದರು ಎಂದು ಹೇಳಿಕೆ ನೀಡಿದ್ದಾರೆ. “ಗುದ್ದಲಿ ಪೂಜೆಯನ್ನು ನೆರವೇರಿಸಲು ಶಾಸಕರಿಗೆ ಕಾಮಗಾರಿ ಅಂದಾಜಿನ ಶೇ. 5 ರಿಂದ 10 ರಷ್ಟು ಲಂಚ ಕೇಳಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಈ ನಿರ್ದಿಷ್ಟ ಪ್ರಕರಣದಲ್ಲಿ ಆಯೋಗವು ಸಮಗ್ರ ತನಿಖೆ ನಡೆಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯನ್ನು ಶಿಫಾರಸು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT